Categories: ಕೋಲಾರ

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಫೆ. 20 ಮುಖ್ಯಮಂತ್ರಿ ಮನೆ ಮುತ್ತಿಗೆಗೆ ನಿರ್ಧಾರ- ಎಂ.ಬಿ ನಾಡಗೌಡ,

ಕೋಲಾರ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಫೆಬ್ರವರಿ 20 ರಂದು ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಎಂ.ಬಿ ನಾಡಗೌಡ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್, ಕ್ಲಕ್, ಡಾಟಾ ಎಂಟ್ರಿ ಆಪರೇಟರ್ ಗಳ ವಿಭಾಗ ಮಟ್ಟದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಅವರ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲವಾಗಿದೆ ಕೂಡಲೇ ಸರ್ಕಾರ ನೌಕರರ ಹಿತಕಾಯುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ ಸುಮಾರು ತಿಂಗಳಿಂದ ವೇತನ ಕೊಟ್ಟಿಲ್ಲ ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಮತ್ತು ಪಂಚಾಯಿತಿಗೆ ಆದಾಯ ಬರುತ್ತಿಲ್ಲ ಎಂದು ಸಬೂಬು ಹೇಳುತ್ತಾರೆ ಇದರ ವಿರುದ್ದ ಸಿಎಂ ಮನೆ ಮುತ್ತಿಗೆ ಹಾಕಿ ನ್ಯಾಯ ಕೇಳಲಾಗುತ್ತದೆ ಎರಡು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರಿಗೆ ವಂಚಿಸುತ್ತಿದ್ದಾರೆ ಕರ ಸಂಗ್ರಹಗಾರ ಹುದ್ದೆಯಿಂದ ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಗ್ರಾಮ ಪಂಚಾಯಿತಿ ನೌಕರರು ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ಜನರಿಗೆ ಅನುಕೂಲಕರವಾದ ಯೋಜನೆಗಳನ್ನು ತಲುಪಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಆದರೆ ಅವರ ಬದುಕು ಹಸನಾಗಿಲ್ಲ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ ಆದಾಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ನಿಗದಿಪಡಿಸಿ ವೇತನ ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಮರನಾರಾಯಣ್, ಖಜಾಂಚಿ ಕೇಶವರಾಜ್, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಪಾಪಣ್ಣ ಸೇರಿದಂತೆ ಎರಡು ಜಿಲ್ಲೆಯ ಪದಾಧಿಕಾರಿಗಳು ತಾಲೂಕು ಅಧ್ಯಕ್ಷ ಕಾರ್ಯದರ್ಶಿಗಳು ಮುಖಂಡರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

13 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago