Categories: ಕೋಲಾರ

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಫೆ. 20 ಮುಖ್ಯಮಂತ್ರಿ ಮನೆ ಮುತ್ತಿಗೆಗೆ ನಿರ್ಧಾರ- ಎಂ.ಬಿ ನಾಡಗೌಡ,

ಕೋಲಾರ: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಫೆಬ್ರವರಿ 20 ರಂದು ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಎಂ.ಬಿ ನಾಡಗೌಡ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್, ಕ್ಲಕ್, ಡಾಟಾ ಎಂಟ್ರಿ ಆಪರೇಟರ್ ಗಳ ವಿಭಾಗ ಮಟ್ಟದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಅವರ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲವಾಗಿದೆ ಕೂಡಲೇ ಸರ್ಕಾರ ನೌಕರರ ಹಿತಕಾಯುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ ಸುಮಾರು ತಿಂಗಳಿಂದ ವೇತನ ಕೊಟ್ಟಿಲ್ಲ ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಮತ್ತು ಪಂಚಾಯಿತಿಗೆ ಆದಾಯ ಬರುತ್ತಿಲ್ಲ ಎಂದು ಸಬೂಬು ಹೇಳುತ್ತಾರೆ ಇದರ ವಿರುದ್ದ ಸಿಎಂ ಮನೆ ಮುತ್ತಿಗೆ ಹಾಕಿ ನ್ಯಾಯ ಕೇಳಲಾಗುತ್ತದೆ ಎರಡು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರಿಗೆ ವಂಚಿಸುತ್ತಿದ್ದಾರೆ ಕರ ಸಂಗ್ರಹಗಾರ ಹುದ್ದೆಯಿಂದ ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಗ್ರೇಡ್–2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಗ್ರಾಮ ಪಂಚಾಯಿತಿ ನೌಕರರು ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ಜನರಿಗೆ ಅನುಕೂಲಕರವಾದ ಯೋಜನೆಗಳನ್ನು ತಲುಪಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಆದರೆ ಅವರ ಬದುಕು ಹಸನಾಗಿಲ್ಲ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ದೊರಕುತ್ತಿಲ್ಲ ಆದಾಯಕ್ಕೆ ಅನುಗುಣವಾಗಿ ಹುದ್ದೆಗಳನ್ನು ನಿಗದಿಪಡಿಸಿ ವೇತನ ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಮರನಾರಾಯಣ್, ಖಜಾಂಚಿ ಕೇಶವರಾಜ್, ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಪಾಪಣ್ಣ ಸೇರಿದಂತೆ ಎರಡು ಜಿಲ್ಲೆಯ ಪದಾಧಿಕಾರಿಗಳು ತಾಲೂಕು ಅಧ್ಯಕ್ಷ ಕಾರ್ಯದರ್ಶಿಗಳು ಮುಖಂಡರು ಇದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

8 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

9 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

9 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

9 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

12 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

15 hours ago