Categories: ಕೋಲಾರ

ಗ್ರಾಮಕ್ಕೊಂದು ಎಂಪಿಸಿಎಸ್, 3 ಗ್ರಾಮಗಳಿಗೊಂದು ಎಸ್‌ಎಫ್‌ಸಿಎಸ್ ಸ್ಥಾಪನೆಗೆ ಚಿಂತನೆ- ರೈತರ ಸ್ವಾವಲಂಬನೆ ಸಹಕಾರ ರಂಗದಿಂದ ಮಾತ್ರವೇ ಸಾಧ್ಯ – ಶಾಸಕ ಕೊತ್ತೂರು ಮಂಜುನಾಥ್

ಕೋಲಾರ:- ರೈತರು,ಮಹಿಳೆಯರ ಸ್ವಾವಲಂಬನೆ ಸಹಕಾರ ರಂಗದಿಂದ ಮಾತ್ರ ಸಾಧ್ಯವಿದ್ದು, ಪ್ರತಿ ಗ್ರಾಮದಲ್ಲೂ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಮೂರು ಹಳ್ಳಿಗಳಿಗೊಂದು ರೈತರ ಹಾಗೂ ರೇಷ್ಮೆಬೆಳೆಗಾರರ ಸಹಕಾರ ಸಂಘ ಸ್ಥಾಪಿಸುವ ಅಗತ್ಯವಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ,ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು ವಿಷಯದಡಿ ನಡೆದ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೋವಿಡ್ ಬಂದಾಗ ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿತ್ತು, ಇಂತಹ ಸಂದರ್ಭದಲ್ಲಿ ರೈತರನ್ನು ಉಳಿಸಿದ್ದೇ ಹೈನುಗಾರಿಕೆ ಎಂದ ಅವರು, ರೈತರಿಗಾಗಿಯೇ ಸಹಕಾರಿ ಸಂಸ್ಥೆಗಳನ್ನು ಕಟ್ಟಲಾಗಿದೆ ಎಂದು ತಿಳಿಸಿದರು.

ಸಹಕರ ರತ್ನ ಪ್ರಶಸ್ತಿ ಸಿಕ್ಕಿದ್ದಕ್ಕೆ ಸಂತಸವಿದೆ ಎಂದ ಅವರು, ನಷ್ಟದಲ್ಲಿದ್ದ ಮುಳಬಾಗಿಲು ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ ಟಿಎಪಿಸಿಎಂಎಸ್ ದುಸ್ಥಿತಿ ಸರಿಪಡಿಸಲು ಪಕ್ಷಬೇಧ ಮರೆತು ಎಲ್ಲರೂ ನನ್ನನ್ನು ಅಧ್ಯಕ್ಷರನ್ನಾಗಿ ಮಾಡಿದ್ದನ್ನು ಸ್ಮರಿಸಿದ ಅವರು, ಈ ಸಂಸ್ಥೆ ಮೂಲಕ ಗೊಬ್ಬರ,ಪಡಿತರ ಮಾರಾಟ ನಡೆಸುತ್ತಿದ್ದು, ಇದ್ನು ಉಳಿಸಿದ ಆತ್ಮತೃಪ್ತಿ ಇದೆ, 30 ಸಾವಿರ ಇದ್ದ ವಹಿವಾಟು ಇಂದು 2 ಲಕ್ಷ ದಾಟಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಯೂರಿಯಾ ಒಂದುಮೂಟೆಗೆ 1200ರೂ. ಸಬ್ಸಿಡಿ ನೀಡುತ್ತಿದೆ, ಡಿಎಪಿ ಗೊಬ್ಬರಕ್ಕೆ 1200 ರೂ. ನೀಡುತ್ತಿದೆ ಎಂದ ಅವರು, ರೈತರ ಅಭ್ಯುದಯದಿಂದ ಮಾತ್ರವೇ ದೇಶ ಉಳಿಯಲು ಸಾಧ್ಯ ಎಂದು ತಿಳಿಸಿ, ಸಹಕಾರ ರಂಗ ಪಡಿತರ ಮಾರಾಟಕ್ಕೆ ಸೀಮಿತವಾಗದೇ ಶಾಲೆ,ವಾಹನ,ಆಸ್ಪತ್ರೆ ಎಲ್ಲವನ್ನು ಮಾಡಬಹುದು, ಆದರೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲವಾಗಿರುವುದು ವಿಷಾದದ ಸಂಗತಿ ಎಂದು ತಿಳಿಸಿ ಸಹಕಾರ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಸಾಧನೆಯನ್ನು ಸ್ಮರಿಸಿದರು.

ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ,ಸಹಕಾರ ಸಚಿವ ರಾಜಣ್ಣ ಸೇರಿ ಸಹಕಾರಿ ಕಾಯಿದೆ ತಿದ್ದುಪಡಿ ಈ ರಂಗವನ್ನು ಬಲಗೊಳಿಸುವ ಯತ್ನ ನಡೆಸಿದ್ದಾರೆ. ಈ ಹೊಸಕಾಯಿದೆ ಜಾರಿಯಾದರೆ 3 ವರ್ಷಗಳಿಗೊಮ್ಮೆ ಚುನಾವಣೆ,ಜಿಲ್ಲಾ,ರಾಜ್ಯ ಹಂತದಲ್ಲಿ ಮೀಸಲು ಸೌಲಭ್ಯ,ಎಲ್ಲಾ ವರ್ಗಗಳಿಗೂ ಅಧ್ಯಕ್ಷರಾಗುವ ಅವಕಾಶ,ನಾಮಿನಿ ಸದಸ್ಯರಿಗೆ ಅಧ್ಯಕ್ಷರಾಗಲು ಅವಕಾಶ ಇಲ್ಲವಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಕೆ.ಶ್ರೀನಿವಾಸಗೌಡರ ನಂತರ ಅವರು ಅಭಿವೃದ್ದಿಪಡಿಸಿದ ಸಹಕಾರಿ ತೇರನ್ನು ಶಾಸಕ ಕೊತ್ತೂರು ಮಂಜುನಾಥ್ ಮುಂದುವರೆಸಲಿ ಎಂದು ಆಶಿಸಿದರು.

ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ,ಭ್ರಷ್ಟಾಚಾರ ಮುಕ್ತ ಸಹಕಾರಿ ವ್ಯವಸ್ಥೆ ನಿರ್ಮಾಣ ಇಂದಿನ ಅಗತ್ಯವಾಗಿದೆ, ಈ ಕ್ಷೇತ್ರದಲ್ಲಿ ಶ್ರೀನಿವಾಸಗೌಡರು ಮಾಡಿದ ಸಾಧನೆ ಮರೆಯಲು ಸಾಧ್ಯವಿಲ್ಲ, ನೇರವಾಗಿ ರೈತರು,ಮಹಿಳೆಯರಿಗೆ ನೆರವಾಗಲು ಈ ಕ್ಷೇತ್ರದಿಂದ ಮಾತ್ರವೇ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಕಾರಿ ಯೂನಿಯನ್ ಅಧ್ಯಕ್ಷ ಪಾಕರಹಳ್ಳಿ ವೆಂಕಟೇಶ್, ನಗರದ ಇಟಿಸಿಎಂ ಆಸ್ಪತ್ರೆ ಮುಂಭಾಗ ಇರುವ ಸಹಕಾರಿ ಯೂನಿಯನ್ ನಿವೇಶನ ರಕ್ಷಣೆಗೆ ಕಾಂಪೌಂಡ್ ನಿರ್ಮಿಸಿಕೊಡಲು ಶಾಸಕರಿಗೆ ಮನವಿ ಮಾಡಿದಾಗ ಕೊತ್ತೂರು ಮಂಜುನಾಥ್ ಈ ಕೆಲಸ ಮಾಡಿಕೊಡುವ ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಮಾತನಾಡಿ, ವಿಕಸಿದ ಭಾರತ ಧ್ಯೇಯದ ಸಹಕಾರಿ ಸಪ್ತಾಹದ ಧ್ಯೇಯ ವಿಕಸಿತ ಕೋಲಾರವೂ ಆಗಿರಲಿ ಎಂದು ತಿಳಿಸಿ, ಜಿಲ್ಲೆಯ ಸಹಕಾರಿ ಕ್ಷೇತ್ರದ ಎರಡು ಕಣ್ಣುಗಳಾಗಿರುವ ಡಿಸಿಸಿ ಬ್ಯಾಂಕ್, ಕೋಚಿಮುಲ್ ಇತ್ತೀಚಿನ ದಿನಗಳಲ್ಲಿ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವುದು ವಿಷಾದದ ಸಂಗತಿ ಎಂದು ತಿಳಿಸಿ, ಅದರ ತಾಯಂತಿರುವ ಸಹಕಾರಿ ಯೂನಿಯನ್ ಇದನ್ನು ಸರಿಪಡಿಸುವಪ್ರಯತ್ನ ನಡೆಸಲಿ ಎಂದು ಆಶಿಸಿ, ಕೋಲಾರ ಪತ್ರಕರ್ತರ ಸಹಕಾರ ಸಂಘ ಈಗಾಗಲೇ 50 ಸಾವಿರ ರೂ ಸಾಲ ಸೌಲಭ್ಯ ಒದಗಿಸುತ್ತಿದ್ದು,ಶೇ. 95 ವಸೂಲಾತಿ ಇದೆ, ಈ ನಿಟ್ಟಿನಲ್ಲಿ ಸಂಘದ ಸದಸ್ಯರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಸಹಕಾರ ಕೋರಿದರು.

ಕಾರ್ಯಕ್ರಮದಲ್ಲಿ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಶಾಸಕ ಕೊತ್ತೂರು ಮಂಜುನಾಥ್‌ರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಯೂನಿಯನ್ ಉಪಾಧ್ಯಕ್ಷ ಕಲ್ವಮಂಜಲಿ ಬೈರೇಗೌಡ, ಮಾಜಿ ಅಧ್ಯಕ್ಷರುಗಳಾದ ಮೂರಾಂಡಹಳ್ಳಿ ಡಾ.ಇ.ಗೋಪಾಲಪ್ಪ, ಪೆಮ್ಮಶೆಟ್ಟಿಹಳ್ಳಿ ಸುರೇಶ್, ನಿರ್ದೇಶಕರಾದ ಚಂಜಿಮಲೆ ರಮೇಶ್, ಕೆ.ಎಂ.ಮಂಜುನಾಥ್, ಪತ್ರಕರ್ತ ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಗ್ಯಾರೆಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶಿವಕುಮಾರ್, ನರಸಾಪುರ ಎಸ್‌ಎಫ್‌ಸಿಎಸ್ ಅಧ್ಯಕ್ಷ ಮುನಿರಾಜು, ಯೂನಿಯನ್ ಸಿಇಒ ಕೆ.ಎಂ.ಭಾರತಿ, ಸಿಬ್ಬಂದಿ ಲಕ್ಷ್ಮೀ ರವಿ ಮತ್ತಿತರರಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

39 minutes ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

20 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

22 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago