ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ದುರಸ್ತಿಯಾಗಬೇಕಾಗಿರುವ ಶುದ್ಧ ನೀರಿನ ಘಟಕಗಳನ್ನು (ಆರ್.ಒ ಪ್ಲಾಂಟ್) ಈ ವರ್ಷ ಆದ್ಯತೆಯ ಮೇಲೆ ಸರಿಪಡಿಸಲು ಉದ್ದೇಶಿಸಿದ್ದು, ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಿ ವರದಿಯನ್ನು ಸಿದ್ಧಪಡಿಸಿ ಕಳುಹಿಸುವಂತೆ ಎಲ್ಲ ಸಿಇಒಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಈಗಾಗಲೇ ನೀಡಿರುವ ಸೂಚನೆಗಳಂತೆ ಕ್ರಮಕೈಗೊಳ್ಳಲು ನಿರ್ದೇಶಿಸಲಾಗಿದೆ. ಬೇಸಿಗೆ ಎದುರಿಸಲು ಜಿಲ್ಲೆಗಳಿಗೆ ವಿಶೇಷ ಅನುದಾನ ನೀಡಲಾಗಿದ್ದು, ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಕಡೆ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳು ನೀರಿನ ಮೂಲಗಳಿಲ್ಲದ ಕಾರಣ ಸ್ಥಗಿತಗೊಂಡಿವೆ. ಘಟಕಗಳನ್ನು ನಿರ್ವಹಣೆ ಮಾಡುವ ಹೊಣೆಗಾರಿಕೆಯನ್ನು ನಿಗದಿ ಪಡಿಸದಿರುವುದು ಸೇರಿದಂತೆ, ಹಲವು ಕಾರಣಗಳಿಂದ ಕಾರ್ಯನಿರ್ವಹಿಸದಿರುವ ಘಟಕಗಳನ್ನು ದುರಸ್ತಿಗೊಳಿಸುವ ಮುನ್ನ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಈ ಸಂಬಂಧ ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸಿ, ವಾಸ್ತವಿಕ ವರದಿಯನ್ನು ಕಳುಹಿಸುವಂತೆ ತಿಳಿಸಲಾಗಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ಸಲ್ಲಿಸುವ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಉತ್ತರ ನೀಡುವ ಮೂಲಕ ಅಧಿಕಾರಿಗಳು ಉತ್ತರದಾಯಿಗಳಾಗಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಳೆದ ವರ್ಷದಂತೆ ಈ ವರ್ಷವೂ ತಾಲ್ಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಗಳನ್ನು ಆಲಿಸುವ ಸಹಾಯವಾಣಿಗಳನ್ನು ತೆರೆಯಬೇಕೆಂದು ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಬೇಸಿಗೆ ಅವಧಿಯಲ್ಲಿ ಬಾಡಿಗೆಗೆ ಪಡೆಯುವ ಟ್ಯಾಂಕರ್‌ಗಳಿಗೆ ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಹಣ ಪಾವತಿ ಮಾಡುವಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜಿನಿಯರ್‌ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಲಾಗಿದೆ ಎಂದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

4 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

7 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

12 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

13 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

13 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

14 hours ago