ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ದುರಸ್ತಿಯಾಗಬೇಕಾಗಿರುವ ಶುದ್ಧ ನೀರಿನ ಘಟಕಗಳನ್ನು (ಆರ್.ಒ ಪ್ಲಾಂಟ್) ಈ ವರ್ಷ ಆದ್ಯತೆಯ ಮೇಲೆ ಸರಿಪಡಿಸಲು ಉದ್ದೇಶಿಸಿದ್ದು, ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಿ ವರದಿಯನ್ನು ಸಿದ್ಧಪಡಿಸಿ ಕಳುಹಿಸುವಂತೆ ಎಲ್ಲ ಸಿಇಒಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಈಗಾಗಲೇ ನೀಡಿರುವ ಸೂಚನೆಗಳಂತೆ ಕ್ರಮಕೈಗೊಳ್ಳಲು ನಿರ್ದೇಶಿಸಲಾಗಿದೆ. ಬೇಸಿಗೆ ಎದುರಿಸಲು ಜಿಲ್ಲೆಗಳಿಗೆ ವಿಶೇಷ ಅನುದಾನ ನೀಡಲಾಗಿದ್ದು, ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಕಡೆ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳು ನೀರಿನ ಮೂಲಗಳಿಲ್ಲದ ಕಾರಣ ಸ್ಥಗಿತಗೊಂಡಿವೆ. ಘಟಕಗಳನ್ನು ನಿರ್ವಹಣೆ ಮಾಡುವ ಹೊಣೆಗಾರಿಕೆಯನ್ನು ನಿಗದಿ ಪಡಿಸದಿರುವುದು ಸೇರಿದಂತೆ, ಹಲವು ಕಾರಣಗಳಿಂದ ಕಾರ್ಯನಿರ್ವಹಿಸದಿರುವ ಘಟಕಗಳನ್ನು ದುರಸ್ತಿಗೊಳಿಸುವ ಮುನ್ನ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಈ ಸಂಬಂಧ ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸಿ, ವಾಸ್ತವಿಕ ವರದಿಯನ್ನು ಕಳುಹಿಸುವಂತೆ ತಿಳಿಸಲಾಗಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ಸಲ್ಲಿಸುವ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಉತ್ತರ ನೀಡುವ ಮೂಲಕ ಅಧಿಕಾರಿಗಳು ಉತ್ತರದಾಯಿಗಳಾಗಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಳೆದ ವರ್ಷದಂತೆ ಈ ವರ್ಷವೂ ತಾಲ್ಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಗಳನ್ನು ಆಲಿಸುವ ಸಹಾಯವಾಣಿಗಳನ್ನು ತೆರೆಯಬೇಕೆಂದು ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಬೇಸಿಗೆ ಅವಧಿಯಲ್ಲಿ ಬಾಡಿಗೆಗೆ ಪಡೆಯುವ ಟ್ಯಾಂಕರ್‌ಗಳಿಗೆ ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಹಣ ಪಾವತಿ ಮಾಡುವಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜಿನಿಯರ್‌ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಲಾಗಿದೆ ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago