ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು- ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು. ರಾಜಕೀಯ ಕೇವಲ ಎಂಎಲ್ಎ, ಎಂಪಿ, ತಾಲ್ಲೂಕು, ಜಿ.ಪಂ ಚುನಾವಣೆಗಳಲ್ಲಿರಲಿ. ಸಹಕಾರ ರಂಗದಲ್ಲಿ ರಾಜಕೀವಿದ್ದರೆ ಅಭಿವೃದ್ಧಿ ಶೂನ್ಯವಾಗುತ್ತದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನೂತನ ಎಂಪಿಸಿಎಸ್ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲಿನ ಡೇರಿಗಳು ಪಕ್ಷಾತೀತವಾಗಿ ನಡೆಯಬೇಕು. ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಘಗಳು ಅಭಿವೃದ್ಧಿಯಾಗುತ್ತವೆ. ಹಾಲಿ ತಾಲ್ಲೂಕಿನ 204 ಡೇರಿಗಳಲ್ಲಿ 200 ಡೇರಿಗಳು ಲಾಭದಲ್ಲಿವೆ. ನಿಮ್ಮ ಗ್ರಾಮದ ಎಂಪಿಸಿಎಸ್ ನಲ್ಲಿ ಯಾವುದೇ ಲೋಪದೋಷಗಳಿದ್ದರೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.

ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ ಮಾತನಾಡಿ, ಇಡೀ ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬೆಳೆದಿರುವ ಸಂಸ್ಥೆ ಕೆಎಂಎಫ್ ಆಗಿದೆ. ರೈತರಿಗಾಗಿ ಸ್ಥಾಪನೆ ಮಾಡಲಾಗಿರುವ ಕೆಎಂಎಫ್ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಆಧಾರಸ್ತಂಭವಾಗಿದೆ ಎಂದರು.

ಇಂದಿನ ಪರಿಸ್ಥಿತಿಯಲ್ಲಿ ರೈತರ ಜೀವನ ಡೋಲಯಾನವಾಗಿದೆ. ರೈತರಿಗೆ ಗ್ಯಾರಂಟಿ ಹಣದ ವಹಿವಾಟು ಆಗುವುದು ಹಾಲಿನ ಡೇರಿಗಳ ಮೂಲಕ ಮಾತ್ರ. ಹೈನೋದ್ಯಮ ಕಾಲ ಕ್ರಮೇಣ ಕ್ಷಿಣಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಆಹಾರ ಕ್ರಾಂತಿಯಾಗುವುದರಲ್ಲಿ ಅನುಮಾನವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಮುನಿರಾಜೇಗೌಡ, ವಿಸ್ತಾರಣಾಧಿಕಾರಿಗಳಾದ ಕುಸುಮಾ, ಪ್ರಭು, ಹಾಲು ಪರೀಕ್ಷಕ ಸತೀಶ್, ಸಹಾಯಕ ನಾಗರಾಜು, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ ಸುರೇಶ್, ಗಂಗಯ್ಯ, ಕೆಸ್ತೂರು ಗ್ರಾ.ಪಂ ಅಧ್ಯಕ್ಷ ರಮೇಶ್. ಉಪಾಧ್ಯಕ್ಷೆ ಆಂಜಿನಮ್ಮ, ಎಂಪಿಸಿಎಸ್ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಮಮತ, ಡೇರಿ ಮುಖ್ಯಕಾರ್ಯನಿರ್ಹಾಹಕ ಚನ್ನಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

10 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

11 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

12 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

16 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

17 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

17 hours ago