ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು- ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು. ರಾಜಕೀಯ ಕೇವಲ ಎಂಎಲ್ಎ, ಎಂಪಿ, ತಾಲ್ಲೂಕು, ಜಿ.ಪಂ ಚುನಾವಣೆಗಳಲ್ಲಿರಲಿ. ಸಹಕಾರ ರಂಗದಲ್ಲಿ ರಾಜಕೀವಿದ್ದರೆ ಅಭಿವೃದ್ಧಿ ಶೂನ್ಯವಾಗುತ್ತದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನೂತನ ಎಂಪಿಸಿಎಸ್ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲಿನ ಡೇರಿಗಳು ಪಕ್ಷಾತೀತವಾಗಿ ನಡೆಯಬೇಕು. ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಘಗಳು ಅಭಿವೃದ್ಧಿಯಾಗುತ್ತವೆ. ಹಾಲಿ ತಾಲ್ಲೂಕಿನ 204 ಡೇರಿಗಳಲ್ಲಿ 200 ಡೇರಿಗಳು ಲಾಭದಲ್ಲಿವೆ. ನಿಮ್ಮ ಗ್ರಾಮದ ಎಂಪಿಸಿಎಸ್ ನಲ್ಲಿ ಯಾವುದೇ ಲೋಪದೋಷಗಳಿದ್ದರೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.

ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ ಮಾತನಾಡಿ, ಇಡೀ ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬೆಳೆದಿರುವ ಸಂಸ್ಥೆ ಕೆಎಂಎಫ್ ಆಗಿದೆ. ರೈತರಿಗಾಗಿ ಸ್ಥಾಪನೆ ಮಾಡಲಾಗಿರುವ ಕೆಎಂಎಫ್ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಆಧಾರಸ್ತಂಭವಾಗಿದೆ ಎಂದರು.

ಇಂದಿನ ಪರಿಸ್ಥಿತಿಯಲ್ಲಿ ರೈತರ ಜೀವನ ಡೋಲಯಾನವಾಗಿದೆ. ರೈತರಿಗೆ ಗ್ಯಾರಂಟಿ ಹಣದ ವಹಿವಾಟು ಆಗುವುದು ಹಾಲಿನ ಡೇರಿಗಳ ಮೂಲಕ ಮಾತ್ರ. ಹೈನೋದ್ಯಮ ಕಾಲ ಕ್ರಮೇಣ ಕ್ಷಿಣಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಆಹಾರ ಕ್ರಾಂತಿಯಾಗುವುದರಲ್ಲಿ ಅನುಮಾನವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಮುನಿರಾಜೇಗೌಡ, ವಿಸ್ತಾರಣಾಧಿಕಾರಿಗಳಾದ ಕುಸುಮಾ, ಪ್ರಭು, ಹಾಲು ಪರೀಕ್ಷಕ ಸತೀಶ್, ಸಹಾಯಕ ನಾಗರಾಜು, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ ಸುರೇಶ್, ಗಂಗಯ್ಯ, ಕೆಸ್ತೂರು ಗ್ರಾ.ಪಂ ಅಧ್ಯಕ್ಷ ರಮೇಶ್. ಉಪಾಧ್ಯಕ್ಷೆ ಆಂಜಿನಮ್ಮ, ಎಂಪಿಸಿಎಸ್ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಮಮತ, ಡೇರಿ ಮುಖ್ಯಕಾರ್ಯನಿರ್ಹಾಹಕ ಚನ್ನಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

1 hour ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

3 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

16 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

16 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

19 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

19 hours ago