ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು. ರಾಜಕೀಯ ಕೇವಲ ಎಂಎಲ್ಎ, ಎಂಪಿ, ತಾಲ್ಲೂಕು, ಜಿ.ಪಂ ಚುನಾವಣೆಗಳಲ್ಲಿರಲಿ. ಸಹಕಾರ ರಂಗದಲ್ಲಿ ರಾಜಕೀವಿದ್ದರೆ ಅಭಿವೃದ್ಧಿ ಶೂನ್ಯವಾಗುತ್ತದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನೂತನ ಎಂಪಿಸಿಎಸ್ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲಿನ ಡೇರಿಗಳು ಪಕ್ಷಾತೀತವಾಗಿ ನಡೆಯಬೇಕು. ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಘಗಳು ಅಭಿವೃದ್ಧಿಯಾಗುತ್ತವೆ. ಹಾಲಿ ತಾಲ್ಲೂಕಿನ 204 ಡೇರಿಗಳಲ್ಲಿ 200 ಡೇರಿಗಳು ಲಾಭದಲ್ಲಿವೆ. ನಿಮ್ಮ ಗ್ರಾಮದ ಎಂಪಿಸಿಎಸ್ ನಲ್ಲಿ ಯಾವುದೇ ಲೋಪದೋಷಗಳಿದ್ದರೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ ಮಾತನಾಡಿ, ಇಡೀ ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬೆಳೆದಿರುವ ಸಂಸ್ಥೆ ಕೆಎಂಎಫ್ ಆಗಿದೆ. ರೈತರಿಗಾಗಿ ಸ್ಥಾಪನೆ ಮಾಡಲಾಗಿರುವ ಕೆಎಂಎಫ್ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಆಧಾರಸ್ತಂಭವಾಗಿದೆ ಎಂದರು.
ಇಂದಿನ ಪರಿಸ್ಥಿತಿಯಲ್ಲಿ ರೈತರ ಜೀವನ ಡೋಲಯಾನವಾಗಿದೆ. ರೈತರಿಗೆ ಗ್ಯಾರಂಟಿ ಹಣದ ವಹಿವಾಟು ಆಗುವುದು ಹಾಲಿನ ಡೇರಿಗಳ ಮೂಲಕ ಮಾತ್ರ. ಹೈನೋದ್ಯಮ ಕಾಲ ಕ್ರಮೇಣ ಕ್ಷಿಣಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಆಹಾರ ಕ್ರಾಂತಿಯಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಮುನಿರಾಜೇಗೌಡ, ವಿಸ್ತಾರಣಾಧಿಕಾರಿಗಳಾದ ಕುಸುಮಾ, ಪ್ರಭು, ಹಾಲು ಪರೀಕ್ಷಕ ಸತೀಶ್, ಸಹಾಯಕ ನಾಗರಾಜು, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ ಸುರೇಶ್, ಗಂಗಯ್ಯ, ಕೆಸ್ತೂರು ಗ್ರಾ.ಪಂ ಅಧ್ಯಕ್ಷ ರಮೇಶ್. ಉಪಾಧ್ಯಕ್ಷೆ ಆಂಜಿನಮ್ಮ, ಎಂಪಿಸಿಎಸ್ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಮಮತ, ಡೇರಿ ಮುಖ್ಯಕಾರ್ಯನಿರ್ಹಾಹಕ ಚನ್ನಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…