ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು- ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು. ರಾಜಕೀಯ ಕೇವಲ ಎಂಎಲ್ಎ, ಎಂಪಿ, ತಾಲ್ಲೂಕು, ಜಿ.ಪಂ ಚುನಾವಣೆಗಳಲ್ಲಿರಲಿ. ಸಹಕಾರ ರಂಗದಲ್ಲಿ ರಾಜಕೀವಿದ್ದರೆ ಅಭಿವೃದ್ಧಿ ಶೂನ್ಯವಾಗುತ್ತದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನೂತನ ಎಂಪಿಸಿಎಸ್ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲಿನ ಡೇರಿಗಳು ಪಕ್ಷಾತೀತವಾಗಿ ನಡೆಯಬೇಕು. ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಘಗಳು ಅಭಿವೃದ್ಧಿಯಾಗುತ್ತವೆ. ಹಾಲಿ ತಾಲ್ಲೂಕಿನ 204 ಡೇರಿಗಳಲ್ಲಿ 200 ಡೇರಿಗಳು ಲಾಭದಲ್ಲಿವೆ. ನಿಮ್ಮ ಗ್ರಾಮದ ಎಂಪಿಸಿಎಸ್ ನಲ್ಲಿ ಯಾವುದೇ ಲೋಪದೋಷಗಳಿದ್ದರೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.

ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ ಮಾತನಾಡಿ, ಇಡೀ ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬೆಳೆದಿರುವ ಸಂಸ್ಥೆ ಕೆಎಂಎಫ್ ಆಗಿದೆ. ರೈತರಿಗಾಗಿ ಸ್ಥಾಪನೆ ಮಾಡಲಾಗಿರುವ ಕೆಎಂಎಫ್ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಆಧಾರಸ್ತಂಭವಾಗಿದೆ ಎಂದರು.

ಇಂದಿನ ಪರಿಸ್ಥಿತಿಯಲ್ಲಿ ರೈತರ ಜೀವನ ಡೋಲಯಾನವಾಗಿದೆ. ರೈತರಿಗೆ ಗ್ಯಾರಂಟಿ ಹಣದ ವಹಿವಾಟು ಆಗುವುದು ಹಾಲಿನ ಡೇರಿಗಳ ಮೂಲಕ ಮಾತ್ರ. ಹೈನೋದ್ಯಮ ಕಾಲ ಕ್ರಮೇಣ ಕ್ಷಿಣಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಆಹಾರ ಕ್ರಾಂತಿಯಾಗುವುದರಲ್ಲಿ ಅನುಮಾನವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಮುನಿರಾಜೇಗೌಡ, ವಿಸ್ತಾರಣಾಧಿಕಾರಿಗಳಾದ ಕುಸುಮಾ, ಪ್ರಭು, ಹಾಲು ಪರೀಕ್ಷಕ ಸತೀಶ್, ಸಹಾಯಕ ನಾಗರಾಜು, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ ಸುರೇಶ್, ಗಂಗಯ್ಯ, ಕೆಸ್ತೂರು ಗ್ರಾ.ಪಂ ಅಧ್ಯಕ್ಷ ರಮೇಶ್. ಉಪಾಧ್ಯಕ್ಷೆ ಆಂಜಿನಮ್ಮ, ಎಂಪಿಸಿಎಸ್ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಮಮತ, ಡೇರಿ ಮುಖ್ಯಕಾರ್ಯನಿರ್ಹಾಹಕ ಚನ್ನಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

24 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

24 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

24 hours ago