ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು- ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್

ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು. ರಾಜಕೀಯ ಕೇವಲ ಎಂಎಲ್ಎ, ಎಂಪಿ, ತಾಲ್ಲೂಕು, ಜಿ.ಪಂ ಚುನಾವಣೆಗಳಲ್ಲಿರಲಿ. ಸಹಕಾರ ರಂಗದಲ್ಲಿ ರಾಜಕೀವಿದ್ದರೆ ಅಭಿವೃದ್ಧಿ ಶೂನ್ಯವಾಗುತ್ತದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನೂತನ ಎಂಪಿಸಿಎಸ್ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲಿನ ಡೇರಿಗಳು ಪಕ್ಷಾತೀತವಾಗಿ ನಡೆಯಬೇಕು. ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಘಗಳು ಅಭಿವೃದ್ಧಿಯಾಗುತ್ತವೆ. ಹಾಲಿ ತಾಲ್ಲೂಕಿನ 204 ಡೇರಿಗಳಲ್ಲಿ 200 ಡೇರಿಗಳು ಲಾಭದಲ್ಲಿವೆ. ನಿಮ್ಮ ಗ್ರಾಮದ ಎಂಪಿಸಿಎಸ್ ನಲ್ಲಿ ಯಾವುದೇ ಲೋಪದೋಷಗಳಿದ್ದರೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.

ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ ಮಾತನಾಡಿ, ಇಡೀ ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬೆಳೆದಿರುವ ಸಂಸ್ಥೆ ಕೆಎಂಎಫ್ ಆಗಿದೆ. ರೈತರಿಗಾಗಿ ಸ್ಥಾಪನೆ ಮಾಡಲಾಗಿರುವ ಕೆಎಂಎಫ್ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಆಧಾರಸ್ತಂಭವಾಗಿದೆ ಎಂದರು.

ಇಂದಿನ ಪರಿಸ್ಥಿತಿಯಲ್ಲಿ ರೈತರ ಜೀವನ ಡೋಲಯಾನವಾಗಿದೆ. ರೈತರಿಗೆ ಗ್ಯಾರಂಟಿ ಹಣದ ವಹಿವಾಟು ಆಗುವುದು ಹಾಲಿನ ಡೇರಿಗಳ ಮೂಲಕ ಮಾತ್ರ. ಹೈನೋದ್ಯಮ ಕಾಲ ಕ್ರಮೇಣ ಕ್ಷಿಣಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಆಹಾರ ಕ್ರಾಂತಿಯಾಗುವುದರಲ್ಲಿ ಅನುಮಾನವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಮುನಿರಾಜೇಗೌಡ, ವಿಸ್ತಾರಣಾಧಿಕಾರಿಗಳಾದ ಕುಸುಮಾ, ಪ್ರಭು, ಹಾಲು ಪರೀಕ್ಷಕ ಸತೀಶ್, ಸಹಾಯಕ ನಾಗರಾಜು, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ ಸುರೇಶ್, ಗಂಗಯ್ಯ, ಕೆಸ್ತೂರು ಗ್ರಾ.ಪಂ ಅಧ್ಯಕ್ಷ ರಮೇಶ್. ಉಪಾಧ್ಯಕ್ಷೆ ಆಂಜಿನಮ್ಮ, ಎಂಪಿಸಿಎಸ್ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಮಮತ, ಡೇರಿ ಮುಖ್ಯಕಾರ್ಯನಿರ್ಹಾಹಕ ಚನ್ನಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

32 minutes ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

10 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

16 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

17 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago