ಗ್ರಾಮಗಳಲ್ಲಿ ರಾಜಕೀಯ ಮಾಡಲು ಹಾಲು ಉತ್ಪಾದಕ ಸಹಕಾರ ಸಂಘಗಳು ವೇದಿಕೆಯಾಗಬಾರದು. ರಾಜಕೀಯ ಕೇವಲ ಎಂಎಲ್ಎ, ಎಂಪಿ, ತಾಲ್ಲೂಕು, ಜಿ.ಪಂ ಚುನಾವಣೆಗಳಲ್ಲಿರಲಿ. ಸಹಕಾರ ರಂಗದಲ್ಲಿ ರಾಜಕೀವಿದ್ದರೆ ಅಭಿವೃದ್ಧಿ ಶೂನ್ಯವಾಗುತ್ತದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು.
ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನೂತನ ಎಂಪಿಸಿಎಸ್ ಕಟ್ಟಡ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಹಾಲಿನ ಡೇರಿಗಳು ಪಕ್ಷಾತೀತವಾಗಿ ನಡೆಯಬೇಕು. ಡೇರಿಗಳ ಕಾರ್ಯದರ್ಶಿ, ಅಧ್ಯಕ್ಷರುಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಸಂಘಗಳು ಅಭಿವೃದ್ಧಿಯಾಗುತ್ತವೆ. ಹಾಲಿ ತಾಲ್ಲೂಕಿನ 204 ಡೇರಿಗಳಲ್ಲಿ 200 ಡೇರಿಗಳು ಲಾಭದಲ್ಲಿವೆ. ನಿಮ್ಮ ಗ್ರಾಮದ ಎಂಪಿಸಿಎಸ್ ನಲ್ಲಿ ಯಾವುದೇ ಲೋಪದೋಷಗಳಿದ್ದರೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
ಟಿಎಪಿಎಂಸಿಎಸ್ ಅಧ್ಯಕ್ಷ ಆಂಜನೇಗೌಡ ಮಾತನಾಡಿ, ಇಡೀ ದೇಶದಲ್ಲಿಯೇ ಸಹಕಾರಿ ರಂಗದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬೆಳೆದಿರುವ ಸಂಸ್ಥೆ ಕೆಎಂಎಫ್ ಆಗಿದೆ. ರೈತರಿಗಾಗಿ ಸ್ಥಾಪನೆ ಮಾಡಲಾಗಿರುವ ಕೆಎಂಎಫ್ ಸಂಸ್ಥೆ ಲಕ್ಷಾಂತರ ಕುಟುಂಬಗಳಿಗೆ ಆಧಾರಸ್ತಂಭವಾಗಿದೆ ಎಂದರು.
ಇಂದಿನ ಪರಿಸ್ಥಿತಿಯಲ್ಲಿ ರೈತರ ಜೀವನ ಡೋಲಯಾನವಾಗಿದೆ. ರೈತರಿಗೆ ಗ್ಯಾರಂಟಿ ಹಣದ ವಹಿವಾಟು ಆಗುವುದು ಹಾಲಿನ ಡೇರಿಗಳ ಮೂಲಕ ಮಾತ್ರ. ಹೈನೋದ್ಯಮ ಕಾಲ ಕ್ರಮೇಣ ಕ್ಷಿಣಿಸಿದರೆ ಮುಂದಿನ ದಿನಗಳಲ್ಲಿ ಬೃಹತ್ ಆಹಾರ ಕ್ರಾಂತಿಯಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಡೇರಿ ಉಪ ವ್ಯವಸ್ಥಾಪಕ ಎಲ್.ಬಿ ನಾಗರಾಜು, ಮುನಿರಾಜೇಗೌಡ, ವಿಸ್ತಾರಣಾಧಿಕಾರಿಗಳಾದ ಕುಸುಮಾ, ಪ್ರಭು, ಹಾಲು ಪರೀಕ್ಷಕ ಸತೀಶ್, ಸಹಾಯಕ ನಾಗರಾಜು, ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ ಸುರೇಶ್, ಗಂಗಯ್ಯ, ಕೆಸ್ತೂರು ಗ್ರಾ.ಪಂ ಅಧ್ಯಕ್ಷ ರಮೇಶ್. ಉಪಾಧ್ಯಕ್ಷೆ ಆಂಜಿನಮ್ಮ, ಎಂಪಿಸಿಎಸ್ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಮಮತ, ಡೇರಿ ಮುಖ್ಯಕಾರ್ಯನಿರ್ಹಾಹಕ ಚನ್ನಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…