Categories: ಕೋಲಾರ

ಗ್ರಾಮಗಳಲ್ಲಿ ಸುಖ, ಶಾಂತಿ, ನೆಮ್ಮದಿ, ಅನ್ಯೋನ್ಯತೆಗೆ ದೇವಾಲಯಗಳೇ ಸಾಕ್ಷಿ- ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಕೋಲಾರ: ಗ್ರಾಮಗಳಲ್ಲಿ ಸುಖ, ಶಾಂತಿ ನೆಮ್ಮದಿ ಜೀವನಕ್ಕೆ ದೇವಾಲಯಗಳ ನಿರ್ಮಾಣ ಅಗತ್ಯ. ಇದರಿಂದ ಸಮುದಾಯಗಳ ನಡುವೆ ದ್ವೇಷ ಇರುವುದಿಲ್ಲ. ಅನೋನ್ಯ ಜೀವನಕ್ಕೂ ದೇವಾಲಯಗಳು ಸಾಕ್ಷಿಯಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲೂಕಿನ ನರಸಾಪುರ ಹೋಬಳಿಯ ಖಾಜಿಕಲ್ಲಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆ ಮಾರಮ್ಮ ದೇವಿ ಹಾಗೂ ನಾಗದೇವತೆಗಳ ಸ್ಥಿರ ಬಿಂಬ ಪ್ರತಿಷ್ಠಾಪನೆ ಹಾಗೂ ನೂತನ ವಿಮಾನ ಗೋಪುರ ಮಹಾ ಕುಂಬಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಒಂದು ಕಡೆ ಕೈಗಾರಿಕೆಗಳ ಸ್ಥಾಪನೆಯಾಗಿ ಉದ್ಯೋಗ ಸಿಗುವಂತಿದೆ ಮತ್ತೊಂದು ಕಡೆ ಧಾರ್ಮಿಕತೆಯ ಬೆಳೆಸುವ ಕಾರ್ಯಗಳು ಒಟ್ಟಿಗೆ ಹೋದಾಗ ಗ್ರಾಮವು ಸಮೃದ್ಧವಾಗುತ್ತದೆ ಇಂತಹ ಬೆಳವಣಿಗೆಗಳು ಪ್ರತಿಯೊಂದು ಗ್ರಾಮಗಳಲ್ಲಿ ನಡೆಯಬೇಕಾಗಿದೆ. ಮನುಷ್ಯನ ಜೀವನಕ್ಕೆ ಉದ್ಯೋಗ ಧಾರ್ಮಿಕ ಆಚರಣೆಯ ಭಕ್ತಿ ಭಾವನೆಗೆ ದೇವರ ಗುಡಿಗಳು ಅವಶ್ಯಕತೆ ಇದೆ. ಭಾರತದಲ್ಲಿ ಸಾಮಾನ್ಯ ವ್ಯಕ್ತಿಯೂ ಸಹ ಧಾರ್ಮಿಕತೆಯನ್ನು ಸಾರುವಂತಾಗಿದ್ದಾರೆ ಆಧುನಿಕ ಯುಗದಲ್ಲಿ ಮನುಷ್ಯನ ಮನಸ್ಸು ಚಂಚಲವಾಗಿದ್ದು, ನಾವೆಲ್ಲರೂ ಸದಾ ಕಾಲ ದೇವರ ಕಡೆ ಮನಸ್ಸನ್ನು ಒಯ್ಯಬೇಕಿದೆ ಎಂದರು

ಮನುಷ್ಯ ತಾನು ಬೆಳೆದು ಬಂದ ದಾರಿಯನ್ನು ಮರೆಯಬಾರದು ಯಾವುದೇ ರಂಗದಲ್ಲಿ ಇದ್ದರೂ ಕೂಡ ದೇವರ ಸ್ಮರಣೆಯನ್ನು ಮಾಡಬೇಕು. ಆಗ ಮಾತ್ರ ನಮಗೆ ಸುಖ ನೆಮ್ಮದಿ ಶಾಂತಿ ಪ್ರಾಪ್ತಿಯಾಗಲಿದೆ. ಸಂಸಾರದ ಜಂಜಾಟದಲ್ಲಿ ಮುಂದೆ ಹೋಗಲು ಆಗುತ್ತಿಲ್ಲ. ದೇವರು, ದೇಹವೆಂಬ ಹಣತೆಗೆ ಎಣ್ಣೆ ಹಾಕಿ, ದೀಪ ಹಚ್ಚಿ ಭೂಮಿಗೆ ಕಳಿಸಿದ್ದಾನೆ. ನಾವು ಅದನ್ನು ಸರಿಯಾದ ಕಡೆ ಇರುವ ರೀತಿ ನೋಡಿಕೊಳ್ಳಬೇಕು. ಅದನ್ನು ಬಿಟ್ಟು ಬೇರೆ ಕಡೆ ನಾವು ಹೋಗುತ್ತಿದ್ದು ದೇವರನ್ನು ಮರೆಯುತ್ತಿದ್ದೇವೆ. ಇದು ಒಳ್ಳೆಯದಲ್ಲ ಪೂಜೆ ಮಾಡಿದ ರೀತಿಯಲ್ಲಿ ದೇಹವನ್ನು ಪ್ರತಿನಿತ್ಯ ಶುದ್ದವಾಗಿ ಇಟ್ಟು ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕಾಗಿದೆ ಎಂದರು.

ಬೆಂಗಳೂರು ಡಿಸಿಪಿ ಡಿ.ದೇವರಾಜ್ ಮಾತನಾಡಿ ಗ್ರಾಮಗಳಲ್ಲಿ ಧಾರ್ಮಿಕ ಆಚರಣೆಗಳು ಹೆಚ್ಚು ಹೆಚ್ಚು ನಡೆಯಬೇಕಾಗಿದೆ ಪೂರ್ವಜರ ಆಚಾರ ವಿಚಾರಗಳನ್ನು ಮರೆಯದಂತೆ ಇಂದಿನ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕಾಗಿದೆ ಇದರಿಂದಾಗಿ ಹಳ್ಳಿಗಳಲ್ಲಿ ಶಾಂತಿ, ಸೌಹಾರ್ದ, ಏಕತೆಯ ಮೂಲಕ ದುಡಿಮೆಯಲ್ಲಿ ದೇವರನ್ನು ಕಾಣಬೇಕು. ದುಡಿದು, ಹಂಚಿ ತಿನ್ನುವುದರಿಂದ ಮನುಕುಲದ ಏಳಿಗೆಯಾಗಲಿದೆ. ಮೇಲುಕೀಳು ಎಂಬುದನ್ನು ಬಿಟ್ಟು ಎಲ್ಲರೂ ಸಮಾನರು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಬರಬೇಕಾಗಿದೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಮನುಷ್ಯನ ಇವತ್ತಿನ ಒತ್ತಡಗಳ ಜೀವನದಲ್ಲಿ ದೇವಸ್ಥಾನಗಳು ಅತ್ಯವಶ್ಯಕವಾಗಿ ಬೇಕಾಗಿದ್ದು ಮಾನಸಿಕ ನೆಮ್ಮದಿ ಸಿಗುವ ತಾಣ ಎಂದರೆ ಅದು ದೇವಸ್ಥಾನವಾಗಿದೆ. ಹಣ, ಅಧಿಕಾರ ಇದ್ದರೂ ಕೂಡ ನೆಮ್ಮದಿ ಇಲ್ಲದೆ ಇದ್ದರೆ ಜೀವನದಲ್ಲಿ ಸುಖಪಡಲು ಆಗುವುದಿಲ್ಲ ರಾಜಕಾರಣವನ್ನು ಕೇವಲ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ ಅಭಿವೃದ್ಧಿ ವಿಚಾರ ಬಂದಾಗ ರಾಜಕಾರಣ ಬದಿಗೊತ್ತಿ ಕೈಜೋಡಿಸಬೇಕಾಗಿದೆ ಕ್ಷೇತ್ರದ ಅಭಿವೃದ್ಧಿಗೆ ಹಣದ ಕೊರತೆಯಿಲ್ಲ ಯಾವುದೇ ಒಳ್ಳೆಯ ಕೆಲಸಗಳಿಗೆ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಭಾಗವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಮಾತನಾಡಿ ಇಂತಹ ದೇವರ ಕಾರ್ಯ ನಡೆಸಲು ಗ್ರಾಮದ ಪ್ರತಿಯೊಬ್ಬರೂ ಸಣ್ಣಮಟ್ಟದಿಂದ ಹಿಡಿದ ದೊಡ್ಡ ಮಟ್ಟದವರೆಗೆ ಸಹಾಯ ಮಾಡಿದ್ದಾರೆ ಇದೇ ರೀತಿಯಲ್ಲಿ ಸೌಹಾರ್ದತೆಯಿಂದ ಮುಂದುವರೆಯುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ, ನಾಗಲಾಪುರ ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಪಟ್ಟದ ತೇಜೇಶಲಿಂಗ ಶಿವಾಜಾರ್ಯ ಸ್ವಾಮೀಜಿ, ಕಂದಾಯ ಸಚಿವ ಸಿ.ಬಿ ಕೃಷ್ಣಬೈರೇಗೌಡ, ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, , ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ನಂದಿನಿ ಪ್ರವೀಣ್, ಮೈಲಾಂಡಹಳ್ಳಿ ಮುರಳಿ, ಚಂಜಿಮಲೆ ರಮೇಶ್, ಕಲ್ಲಂಡೂರು ಲೋಕೇಶ್, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಸೀತಿಹೊಸೂರು ಮುರಳಿಗೌಡ, ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ, ಶಿವಕುಮಾರ್ ದೀಕ್ಷಿತ್, ಮುಂತಾದವರು ಇದ್ದರು

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago