Categories: ಕೋಲಾರ

ಗ್ರಾಮಗಳಲ್ಲಿ ಸುಖ, ಶಾಂತಿ, ನೆಮ್ಮದಿ, ಅನ್ಯೋನ್ಯತೆಗೆ ದೇವಾಲಯಗಳೇ ಸಾಕ್ಷಿ- ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಕೋಲಾರ: ಗ್ರಾಮಗಳಲ್ಲಿ ಸುಖ, ಶಾಂತಿ ನೆಮ್ಮದಿ ಜೀವನಕ್ಕೆ ದೇವಾಲಯಗಳ ನಿರ್ಮಾಣ ಅಗತ್ಯ. ಇದರಿಂದ ಸಮುದಾಯಗಳ ನಡುವೆ ದ್ವೇಷ ಇರುವುದಿಲ್ಲ. ಅನೋನ್ಯ ಜೀವನಕ್ಕೂ ದೇವಾಲಯಗಳು ಸಾಕ್ಷಿಯಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ತಾಲೂಕಿನ ನರಸಾಪುರ ಹೋಬಳಿಯ ಖಾಜಿಕಲ್ಲಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆ ಮಾರಮ್ಮ ದೇವಿ ಹಾಗೂ ನಾಗದೇವತೆಗಳ ಸ್ಥಿರ ಬಿಂಬ ಪ್ರತಿಷ್ಠಾಪನೆ ಹಾಗೂ ನೂತನ ವಿಮಾನ ಗೋಪುರ ಮಹಾ ಕುಂಬಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಒಂದು ಕಡೆ ಕೈಗಾರಿಕೆಗಳ ಸ್ಥಾಪನೆಯಾಗಿ ಉದ್ಯೋಗ ಸಿಗುವಂತಿದೆ ಮತ್ತೊಂದು ಕಡೆ ಧಾರ್ಮಿಕತೆಯ ಬೆಳೆಸುವ ಕಾರ್ಯಗಳು ಒಟ್ಟಿಗೆ ಹೋದಾಗ ಗ್ರಾಮವು ಸಮೃದ್ಧವಾಗುತ್ತದೆ ಇಂತಹ ಬೆಳವಣಿಗೆಗಳು ಪ್ರತಿಯೊಂದು ಗ್ರಾಮಗಳಲ್ಲಿ ನಡೆಯಬೇಕಾಗಿದೆ. ಮನುಷ್ಯನ ಜೀವನಕ್ಕೆ ಉದ್ಯೋಗ ಧಾರ್ಮಿಕ ಆಚರಣೆಯ ಭಕ್ತಿ ಭಾವನೆಗೆ ದೇವರ ಗುಡಿಗಳು ಅವಶ್ಯಕತೆ ಇದೆ. ಭಾರತದಲ್ಲಿ ಸಾಮಾನ್ಯ ವ್ಯಕ್ತಿಯೂ ಸಹ ಧಾರ್ಮಿಕತೆಯನ್ನು ಸಾರುವಂತಾಗಿದ್ದಾರೆ ಆಧುನಿಕ ಯುಗದಲ್ಲಿ ಮನುಷ್ಯನ ಮನಸ್ಸು ಚಂಚಲವಾಗಿದ್ದು, ನಾವೆಲ್ಲರೂ ಸದಾ ಕಾಲ ದೇವರ ಕಡೆ ಮನಸ್ಸನ್ನು ಒಯ್ಯಬೇಕಿದೆ ಎಂದರು

ಮನುಷ್ಯ ತಾನು ಬೆಳೆದು ಬಂದ ದಾರಿಯನ್ನು ಮರೆಯಬಾರದು ಯಾವುದೇ ರಂಗದಲ್ಲಿ ಇದ್ದರೂ ಕೂಡ ದೇವರ ಸ್ಮರಣೆಯನ್ನು ಮಾಡಬೇಕು. ಆಗ ಮಾತ್ರ ನಮಗೆ ಸುಖ ನೆಮ್ಮದಿ ಶಾಂತಿ ಪ್ರಾಪ್ತಿಯಾಗಲಿದೆ. ಸಂಸಾರದ ಜಂಜಾಟದಲ್ಲಿ ಮುಂದೆ ಹೋಗಲು ಆಗುತ್ತಿಲ್ಲ. ದೇವರು, ದೇಹವೆಂಬ ಹಣತೆಗೆ ಎಣ್ಣೆ ಹಾಕಿ, ದೀಪ ಹಚ್ಚಿ ಭೂಮಿಗೆ ಕಳಿಸಿದ್ದಾನೆ. ನಾವು ಅದನ್ನು ಸರಿಯಾದ ಕಡೆ ಇರುವ ರೀತಿ ನೋಡಿಕೊಳ್ಳಬೇಕು. ಅದನ್ನು ಬಿಟ್ಟು ಬೇರೆ ಕಡೆ ನಾವು ಹೋಗುತ್ತಿದ್ದು ದೇವರನ್ನು ಮರೆಯುತ್ತಿದ್ದೇವೆ. ಇದು ಒಳ್ಳೆಯದಲ್ಲ ಪೂಜೆ ಮಾಡಿದ ರೀತಿಯಲ್ಲಿ ದೇಹವನ್ನು ಪ್ರತಿನಿತ್ಯ ಶುದ್ದವಾಗಿ ಇಟ್ಟು ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕಾಗಿದೆ ಎಂದರು.

ಬೆಂಗಳೂರು ಡಿಸಿಪಿ ಡಿ.ದೇವರಾಜ್ ಮಾತನಾಡಿ ಗ್ರಾಮಗಳಲ್ಲಿ ಧಾರ್ಮಿಕ ಆಚರಣೆಗಳು ಹೆಚ್ಚು ಹೆಚ್ಚು ನಡೆಯಬೇಕಾಗಿದೆ ಪೂರ್ವಜರ ಆಚಾರ ವಿಚಾರಗಳನ್ನು ಮರೆಯದಂತೆ ಇಂದಿನ ಯುವ ಪೀಳಿಗೆ ಮುಂದುವರೆಸಿಕೊಂಡು ಹೋಗಬೇಕಾಗಿದೆ ಇದರಿಂದಾಗಿ ಹಳ್ಳಿಗಳಲ್ಲಿ ಶಾಂತಿ, ಸೌಹಾರ್ದ, ಏಕತೆಯ ಮೂಲಕ ದುಡಿಮೆಯಲ್ಲಿ ದೇವರನ್ನು ಕಾಣಬೇಕು. ದುಡಿದು, ಹಂಚಿ ತಿನ್ನುವುದರಿಂದ ಮನುಕುಲದ ಏಳಿಗೆಯಾಗಲಿದೆ. ಮೇಲುಕೀಳು ಎಂಬುದನ್ನು ಬಿಟ್ಟು ಎಲ್ಲರೂ ಸಮಾನರು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಬರಬೇಕಾಗಿದೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಮನುಷ್ಯನ ಇವತ್ತಿನ ಒತ್ತಡಗಳ ಜೀವನದಲ್ಲಿ ದೇವಸ್ಥಾನಗಳು ಅತ್ಯವಶ್ಯಕವಾಗಿ ಬೇಕಾಗಿದ್ದು ಮಾನಸಿಕ ನೆಮ್ಮದಿ ಸಿಗುವ ತಾಣ ಎಂದರೆ ಅದು ದೇವಸ್ಥಾನವಾಗಿದೆ. ಹಣ, ಅಧಿಕಾರ ಇದ್ದರೂ ಕೂಡ ನೆಮ್ಮದಿ ಇಲ್ಲದೆ ಇದ್ದರೆ ಜೀವನದಲ್ಲಿ ಸುಖಪಡಲು ಆಗುವುದಿಲ್ಲ ರಾಜಕಾರಣವನ್ನು ಕೇವಲ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ ಅಭಿವೃದ್ಧಿ ವಿಚಾರ ಬಂದಾಗ ರಾಜಕಾರಣ ಬದಿಗೊತ್ತಿ ಕೈಜೋಡಿಸಬೇಕಾಗಿದೆ ಕ್ಷೇತ್ರದ ಅಭಿವೃದ್ಧಿಗೆ ಹಣದ ಕೊರತೆಯಿಲ್ಲ ಯಾವುದೇ ಒಳ್ಳೆಯ ಕೆಲಸಗಳಿಗೆ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಭಾಗವಹಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಮಾತನಾಡಿ ಇಂತಹ ದೇವರ ಕಾರ್ಯ ನಡೆಸಲು ಗ್ರಾಮದ ಪ್ರತಿಯೊಬ್ಬರೂ ಸಣ್ಣಮಟ್ಟದಿಂದ ಹಿಡಿದ ದೊಡ್ಡ ಮಟ್ಟದವರೆಗೆ ಸಹಾಯ ಮಾಡಿದ್ದಾರೆ ಇದೇ ರೀತಿಯಲ್ಲಿ ಸೌಹಾರ್ದತೆಯಿಂದ ಮುಂದುವರೆಯುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ, ನಾಗಲಾಪುರ ವೀರಸಿಂಹಾಸನ ಸಂಸ್ಥಾನ ಮಠದ ಶ್ರೀ ಪಟ್ಟದ ತೇಜೇಶಲಿಂಗ ಶಿವಾಜಾರ್ಯ ಸ್ವಾಮೀಜಿ, ಕಂದಾಯ ಸಚಿವ ಸಿ.ಬಿ ಕೃಷ್ಣಬೈರೇಗೌಡ, ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, , ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ನಂದಿನಿ ಪ್ರವೀಣ್, ಮೈಲಾಂಡಹಳ್ಳಿ ಮುರಳಿ, ಚಂಜಿಮಲೆ ರಮೇಶ್, ಕಲ್ಲಂಡೂರು ಲೋಕೇಶ್, ಪೆಮ್ಮಶೆಟ್ಟಿಹಳ್ಳಿ ಸುರೇಶ್, ಸೀತಿಹೊಸೂರು ಮುರಳಿಗೌಡ, ದೊಡ್ಡವಲ್ಲಬ್ಬಿ ಲಕ್ಷ್ಮಣಗೌಡ, ಶಿವಕುಮಾರ್ ದೀಕ್ಷಿತ್, ಮುಂತಾದವರು ಇದ್ದರು

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago