ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಿಲ್ಲವೆಂದು ಪಿಡಿಒ ವಿರುದ್ಧ ಸಿಡಿದೆದ್ದ ಗ್ರಾ.ಪಂ ಸದಸ್ಯರು

ಕನಸವಾಡಿ ಗ್ರಾಮ ಪಂಚಾಯಿತಿ ವ್ತಾಪ್ತಿಯ ಕನಸವಾಡಿ, ಮಾರಸಂದ್ರ, ಕನ್ನಮಂಗಲ ಸೇರಿದಂತೆ ಇತರೆ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಫಲರಾಗಿದ್ದಾರೆ ಎಂದು ಕನಸವಾಡಿ ಗ್ರಾಮ ಪಂಚಾಯಿತಿ ಸದಸ್ಯ ಟಿ.ವಿಜಯಕುಮಾರ್ ಅವರು ಆರೋಪಿಸಿದ್ದಾರೆ.

ಕನಸವಾಡಿ ಗ್ರಾಮಪಂಚಾಯಿತಿ ಎದುರು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ, ಚರಂಡಿ ದುರಸ್ತಿ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಇನ್ನಿತರೆ ಸೌಕರ್ಯಗಳು ಇಲ್ಲವೆಂದು ಊರಿನ‌ ಗ್ರಾಮಸ್ಥರು ನಮನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಿಡಿಒ ನಿರ್ಲಕ್ಷ್ಯದಿಂದ ಗ್ರಾಮಸ್ಥರ ಕೆಂಗಣ್ಣಿಗೆ ನಾವು ಗುರಿಯಾಗಿದ್ದೇವೆ. ಗ್ರಾಮಸ್ಥರಿಗೆ ಏನು ಉತ್ತರ ಕೊಡುವುದಕ್ಕೆ ಆಗದೇ ಇಲ್ಲಿ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ನಂತರ ಸದಸ್ಯೆ ಕೆ.ಪಿ.ಶೋಭಾ ಮಾತನಾಡಿ, ನಮ್ಮ ಗ್ರಾಮಕ್ಕೆ ಸೂಕ್ತ ಸವಲತ್ತು ಒದಗಿಸಿ ಎಂದು ಹಲವು ಬಾರಿ ಪಿಡಿಒ ಅವರಿಗೆ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸದೇ ಪಿಡಿಒ ಅವರು ನಿರ್ಲಕ್ಚ್ಯವಹಿಸುತ್ತಿದ್ದಾರೆ. ಇವರಿಂದ ನಾವು ಊರಲ್ಲಿ ಪಂಚಾಯಿತಿ ಸದಸ್ಯರಾಗಿ ತಲೆ ಎತ್ತಿ ತಿರುಗಾಡಲು ಆಗುತ್ತಿಲ್ಲ. ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ಗ್ರಾಮಕ್ಕೆ ಸವಲತ್ತುಗಳನ್ನು ಒದಗಿಸಿಕೊಡಬೇಕು ಎಂದು ಮನವಿ‌ ಮಾಡುತ್ತಿದ್ದೇವೆ ಎಂದರು.

ನಂತರ ಪಿಡಿಒ ಎಲ್.ರಾಮಯ್ಯ ಮಾತನಾಡಿ, ಸದಸ್ಯರ ಆರೋಪ ಸತ್ಯಕ್ಕೆ ದೂರವಾದ ಮಾತು. ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಕರ್ಯಗಳನ್ನು ಸಮನಾವಾಗಿ ನೀಡಲಾಗುತ್ತಿದೆ. ಗ್ರಾಮಸ್ಥರಿಂದ ಯಾವುದೇ ರೀತಿಯ ಸಮಸ್ಯೆಗೆ ಸಂಬಂಧಿಸಿದ ದೂರ ಬಂದಲ್ಲಿ ಖುದ್ದಾಗಿ ನಾನೇ ಭೇಟಿ ನೀಡಿ ಪರಿಶೀಲನೆ ಮಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ಈ ವೇಳೆ ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ರಂಗನಾಥ್, ಕೆ.ಬಿ. ಶ್ರೀನಿವಾಸ್, ಕೆ.ವಿ.ಶ್ರೀಕಾಂತ್, ಮಾಜಿ ಗ್ರಾ.ಪಂ ಸದಸ್ಯ ವೆಂಕಟಮಣಯ್ಯ‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago