ಕನಸವಾಡಿ ಗ್ರಾಮ ಪಂಚಾಯಿತಿ ವ್ತಾಪ್ತಿಯ ಕನಸವಾಡಿ, ಮಾರಸಂದ್ರ, ಕನ್ನಮಂಗಲ ಸೇರಿದಂತೆ ಇತರೆ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಫಲರಾಗಿದ್ದಾರೆ ಎಂದು ಕನಸವಾಡಿ ಗ್ರಾಮ ಪಂಚಾಯಿತಿ ಸದಸ್ಯ ಟಿ.ವಿಜಯಕುಮಾರ್ ಅವರು ಆರೋಪಿಸಿದ್ದಾರೆ.
ಕನಸವಾಡಿ ಗ್ರಾಮಪಂಚಾಯಿತಿ ಎದುರು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ, ಚರಂಡಿ ದುರಸ್ತಿ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಇನ್ನಿತರೆ ಸೌಕರ್ಯಗಳು ಇಲ್ಲವೆಂದು ಊರಿನ ಗ್ರಾಮಸ್ಥರು ನಮನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಿಡಿಒ ನಿರ್ಲಕ್ಷ್ಯದಿಂದ ಗ್ರಾಮಸ್ಥರ ಕೆಂಗಣ್ಣಿಗೆ ನಾವು ಗುರಿಯಾಗಿದ್ದೇವೆ. ಗ್ರಾಮಸ್ಥರಿಗೆ ಏನು ಉತ್ತರ ಕೊಡುವುದಕ್ಕೆ ಆಗದೇ ಇಲ್ಲಿ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ನಂತರ ಸದಸ್ಯೆ ಕೆ.ಪಿ.ಶೋಭಾ ಮಾತನಾಡಿ, ನಮ್ಮ ಗ್ರಾಮಕ್ಕೆ ಸೂಕ್ತ ಸವಲತ್ತು ಒದಗಿಸಿ ಎಂದು ಹಲವು ಬಾರಿ ಪಿಡಿಒ ಅವರಿಗೆ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸದೇ ಪಿಡಿಒ ಅವರು ನಿರ್ಲಕ್ಚ್ಯವಹಿಸುತ್ತಿದ್ದಾರೆ. ಇವರಿಂದ ನಾವು ಊರಲ್ಲಿ ಪಂಚಾಯಿತಿ ಸದಸ್ಯರಾಗಿ ತಲೆ ಎತ್ತಿ ತಿರುಗಾಡಲು ಆಗುತ್ತಿಲ್ಲ. ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ಗ್ರಾಮಕ್ಕೆ ಸವಲತ್ತುಗಳನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತಿದ್ದೇವೆ ಎಂದರು.
ಈ ವೇಳೆ ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ರಂಗನಾಥ್, ಕೆ.ಬಿ. ಶ್ರೀನಿವಾಸ್, ಕೆ.ವಿ.ಶ್ರೀಕಾಂತ್, ಮಾಜಿ ಗ್ರಾ.ಪಂ ಸದಸ್ಯ ವೆಂಕಟಮಣಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…