ಕನಸವಾಡಿ ಗ್ರಾಮ ಪಂಚಾಯಿತಿ ವ್ತಾಪ್ತಿಯ ಕನಸವಾಡಿ, ಮಾರಸಂದ್ರ, ಕನ್ನಮಂಗಲ ಸೇರಿದಂತೆ ಇತರೆ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಫಲರಾಗಿದ್ದಾರೆ ಎಂದು ಕನಸವಾಡಿ ಗ್ರಾಮ ಪಂಚಾಯಿತಿ ಸದಸ್ಯ ಟಿ.ವಿಜಯಕುಮಾರ್ ಅವರು ಆರೋಪಿಸಿದ್ದಾರೆ.
ಕನಸವಾಡಿ ಗ್ರಾಮಪಂಚಾಯಿತಿ ಎದುರು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ, ಚರಂಡಿ ದುರಸ್ತಿ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಇನ್ನಿತರೆ ಸೌಕರ್ಯಗಳು ಇಲ್ಲವೆಂದು ಊರಿನ ಗ್ರಾಮಸ್ಥರು ನಮನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಿಡಿಒ ನಿರ್ಲಕ್ಷ್ಯದಿಂದ ಗ್ರಾಮಸ್ಥರ ಕೆಂಗಣ್ಣಿಗೆ ನಾವು ಗುರಿಯಾಗಿದ್ದೇವೆ. ಗ್ರಾಮಸ್ಥರಿಗೆ ಏನು ಉತ್ತರ ಕೊಡುವುದಕ್ಕೆ ಆಗದೇ ಇಲ್ಲಿ ಬಂದು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ನಂತರ ಸದಸ್ಯೆ ಕೆ.ಪಿ.ಶೋಭಾ ಮಾತನಾಡಿ, ನಮ್ಮ ಗ್ರಾಮಕ್ಕೆ ಸೂಕ್ತ ಸವಲತ್ತು ಒದಗಿಸಿ ಎಂದು ಹಲವು ಬಾರಿ ಪಿಡಿಒ ಅವರಿಗೆ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸದೇ ಪಿಡಿಒ ಅವರು ನಿರ್ಲಕ್ಚ್ಯವಹಿಸುತ್ತಿದ್ದಾರೆ. ಇವರಿಂದ ನಾವು ಊರಲ್ಲಿ ಪಂಚಾಯಿತಿ ಸದಸ್ಯರಾಗಿ ತಲೆ ಎತ್ತಿ ತಿರುಗಾಡಲು ಆಗುತ್ತಿಲ್ಲ. ಕೂಡಲೇ ನಮ್ಮ ಮನವಿಗೆ ಸ್ಪಂದಿಸಿ ಗ್ರಾಮಕ್ಕೆ ಸವಲತ್ತುಗಳನ್ನು ಒದಗಿಸಿಕೊಡಬೇಕು ಎಂದು ಮನವಿ ಮಾಡುತ್ತಿದ್ದೇವೆ ಎಂದರು.
ಈ ವೇಳೆ ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ರಂಗನಾಥ್, ಕೆ.ಬಿ. ಶ್ರೀನಿವಾಸ್, ಕೆ.ವಿ.ಶ್ರೀಕಾಂತ್, ಮಾಜಿ ಗ್ರಾ.ಪಂ ಸದಸ್ಯ ವೆಂಕಟಮಣಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…