ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.
ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.
ಹಾಡೋನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನ ಗುರುತಿಸಿ ಪಟ್ಟಿ ಮಾಡಲಾಗಿದೆ, ಆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದರು.
ಸಭೆಯಲ್ಲಿ ಆಯಾ ಗ್ರಾಮಗಳ ಗ್ರಾಮಸ್ಥರಿಂದ ಸಾಕಷ್ಟು ಸಮಸ್ಯೆಗಳ ದೂರುಗಳು ಕೇಳಿಬಂದಿದ್ದು, ಎಲ್ಲಾ ದೂರಗಳನ್ನು ಆಲಿಸಿದ್ದೇವೆ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಪತ್ರಮುಖೇನ ರವಾನಿಸಿ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿಯಡಿಯಲ್ಲಿ ಬರುವ ಸವಲತ್ತು ಪಡೆಯಲು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಖಂಡಿತವಾಗಿಯೂ ಸವಲತ್ತು ಸಿಗುತ್ತದೆ. ಆದ್ದರಿಂದ ಅಗತ್ಯ ದಾಖಲೆಗಳನ್ನು ಕೊಟ್ಟು ಪಂಚಾಯಿತಿಯ ಸಿಬ್ಬಂದಿಗೆ ಸಹಕರಿಸಿ, ನಿಮ್ಮ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದರು.
ದುರ್ಗೇನಹಳ್ಳಿ ಸೇರಿದಂತೆ ಕೆಲವೊಂದು ಹಳ್ಳಿಗಳಲ್ಲಿ ಚರಂಡಿ ಸಮಸ್ಯೆ ಕಾಡುತ್ತಿದ್ದು, ಇದನ್ನು ಪರಿಹರಿಸಲು ನರೇಗಾದ ಮೂಲಕ ಚರಂಡಿ ಕಾಮಗಾರಿಯನ್ನು ಮಾಡಬೇಕಾಗುತ್ತದೆ. ಆದರೆ, ನರೇಗಾ ಮೂಲಕ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದನ್ನು ಅಧಿಕಾರಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಸ್ವಚ್ಛವಾಹಿನಿಗೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಪನ್ಮೂಲದ ಕೊರೆತೆ ಉಂಟಾಗಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಕೂಡಲೇ ಕ್ರಮವಹಿಸಲಾಗುವಿದು ಎಂದು ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.
ಈ ವೇಳೆ ನರೇಗಾ, ಅರಣ್ಯಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಕೂಲ ಪಡೆದುಕೊಳ್ಳುಲು ಅಧಿಕಾರಿಗಳು ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಗ್ರಾಮ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬಾ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಮುದ್ದುಕೃಷ್ಣಪ್ಪ, ಎಚ್.ನಾರಾಯಣಪ್ಪ, ಹಾಪ್ ಕಾಮ್ಸ್ ನಿರ್ದೇಶಕ ಕದ್ರಪ್ಪ, ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು, ಪರಮೇಶ್, ಚಿಕ್ಕ ಕದ್ರಪ್ಪ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…