ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಹಾಡೋನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನ ಗುರುತಿಸಿ ಪಟ್ಟಿ ಮಾಡಲಾಗಿದೆ, ಆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ಆಯಾ ಗ್ರಾಮಗಳ ಗ್ರಾಮಸ್ಥರಿಂದ ಸಾಕಷ್ಟು ಸಮಸ್ಯೆಗಳ ದೂರುಗಳು ಕೇಳಿಬಂದಿದ್ದು, ಎಲ್ಲಾ ದೂರಗಳನ್ನು ಆಲಿಸಿದ್ದೇವೆ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಪತ್ರಮುಖೇನ ರವಾನಿಸಿ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿಯಡಿಯಲ್ಲಿ ಬರುವ ಸವಲತ್ತು ಪಡೆಯಲು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಖಂಡಿತವಾಗಿಯೂ ಸವಲತ್ತು ಸಿಗುತ್ತದೆ. ಆದ್ದರಿಂದ ಅಗತ್ಯ ದಾಖಲೆಗಳನ್ನು ಕೊಟ್ಟು ಪಂಚಾಯಿತಿಯ ಸಿಬ್ಬಂದಿಗೆ ಸಹಕರಿಸಿ, ನಿಮ್ಮ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದರು.

ದುರ್ಗೇನಹಳ್ಳಿ ಸೇರಿದಂತೆ ಕೆಲವೊಂದು ಹಳ್ಳಿಗಳಲ್ಲಿ  ಚರಂಡಿ ಸಮಸ್ಯೆ ಕಾಡುತ್ತಿದ್ದು, ಇದನ್ನು ಪರಿಹರಿಸಲು ನರೇಗಾದ ಮೂಲಕ ಚರಂಡಿ ಕಾಮಗಾರಿಯನ್ನು  ಮಾಡಬೇಕಾಗುತ್ತದೆ. ಆದರೆ, ನರೇಗಾ ಮೂಲಕ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದನ್ನು ಅಧಿಕಾರಗಳೊಂದಿಗೆ ಚರ್ಚಿಸಿ  ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಸ್ವಚ್ಛವಾಹಿನಿಗೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಪನ್ಮೂಲದ ಕೊರೆತೆ ಉಂಟಾಗಿದ್ದು, ಈ ಬಗ್ಗೆ  ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗಿದೆ.  ಈ ಬಗ್ಗೆ ಕೂಡಲೇ ಕ್ರಮವಹಿಸಲಾಗುವಿದು ಎಂದು  ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಈ ವೇಳೆ ನರೇಗಾ, ಅರಣ್ಯಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಕೂಲ ಪಡೆದುಕೊಳ್ಳುಲು ಅಧಿಕಾರಿಗಳು  ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಗ್ರಾಮ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬಾ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಮುದ್ದುಕೃಷ್ಣಪ್ಪ, ಎಚ್.ನಾರಾಯಣಪ್ಪ, ಹಾಪ್ ಕಾಮ್ಸ್ ನಿರ್ದೇಶಕ ಕದ್ರಪ್ಪ, ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು, ಪರಮೇಶ್, ಚಿಕ್ಕ ಕದ್ರಪ್ಪ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

4 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

4 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

8 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

10 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

13 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

18 hours ago