ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.
ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.
ಹಾಡೋನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನ ಗುರುತಿಸಿ ಪಟ್ಟಿ ಮಾಡಲಾಗಿದೆ, ಆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದರು.
ಸಭೆಯಲ್ಲಿ ಆಯಾ ಗ್ರಾಮಗಳ ಗ್ರಾಮಸ್ಥರಿಂದ ಸಾಕಷ್ಟು ಸಮಸ್ಯೆಗಳ ದೂರುಗಳು ಕೇಳಿಬಂದಿದ್ದು, ಎಲ್ಲಾ ದೂರಗಳನ್ನು ಆಲಿಸಿದ್ದೇವೆ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಪತ್ರಮುಖೇನ ರವಾನಿಸಿ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿಯಡಿಯಲ್ಲಿ ಬರುವ ಸವಲತ್ತು ಪಡೆಯಲು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಖಂಡಿತವಾಗಿಯೂ ಸವಲತ್ತು ಸಿಗುತ್ತದೆ. ಆದ್ದರಿಂದ ಅಗತ್ಯ ದಾಖಲೆಗಳನ್ನು ಕೊಟ್ಟು ಪಂಚಾಯಿತಿಯ ಸಿಬ್ಬಂದಿಗೆ ಸಹಕರಿಸಿ, ನಿಮ್ಮ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದರು.
ದುರ್ಗೇನಹಳ್ಳಿ ಸೇರಿದಂತೆ ಕೆಲವೊಂದು ಹಳ್ಳಿಗಳಲ್ಲಿ ಚರಂಡಿ ಸಮಸ್ಯೆ ಕಾಡುತ್ತಿದ್ದು, ಇದನ್ನು ಪರಿಹರಿಸಲು ನರೇಗಾದ ಮೂಲಕ ಚರಂಡಿ ಕಾಮಗಾರಿಯನ್ನು ಮಾಡಬೇಕಾಗುತ್ತದೆ. ಆದರೆ, ನರೇಗಾ ಮೂಲಕ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದನ್ನು ಅಧಿಕಾರಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಸ್ವಚ್ಛವಾಹಿನಿಗೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಪನ್ಮೂಲದ ಕೊರೆತೆ ಉಂಟಾಗಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಕೂಡಲೇ ಕ್ರಮವಹಿಸಲಾಗುವಿದು ಎಂದು ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.
ಈ ವೇಳೆ ನರೇಗಾ, ಅರಣ್ಯಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಕೂಲ ಪಡೆದುಕೊಳ್ಳುಲು ಅಧಿಕಾರಿಗಳು ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಗ್ರಾಮ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬಾ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಮುದ್ದುಕೃಷ್ಣಪ್ಪ, ಎಚ್.ನಾರಾಯಣಪ್ಪ, ಹಾಪ್ ಕಾಮ್ಸ್ ನಿರ್ದೇಶಕ ಕದ್ರಪ್ಪ, ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು, ಪರಮೇಶ್, ಚಿಕ್ಕ ಕದ್ರಪ್ಪ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…