ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಹಾಡೋನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನ ಗುರುತಿಸಿ ಪಟ್ಟಿ ಮಾಡಲಾಗಿದೆ, ಆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ಆಯಾ ಗ್ರಾಮಗಳ ಗ್ರಾಮಸ್ಥರಿಂದ ಸಾಕಷ್ಟು ಸಮಸ್ಯೆಗಳ ದೂರುಗಳು ಕೇಳಿಬಂದಿದ್ದು, ಎಲ್ಲಾ ದೂರಗಳನ್ನು ಆಲಿಸಿದ್ದೇವೆ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಪತ್ರಮುಖೇನ ರವಾನಿಸಿ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿಯಡಿಯಲ್ಲಿ ಬರುವ ಸವಲತ್ತು ಪಡೆಯಲು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಖಂಡಿತವಾಗಿಯೂ ಸವಲತ್ತು ಸಿಗುತ್ತದೆ. ಆದ್ದರಿಂದ ಅಗತ್ಯ ದಾಖಲೆಗಳನ್ನು ಕೊಟ್ಟು ಪಂಚಾಯಿತಿಯ ಸಿಬ್ಬಂದಿಗೆ ಸಹಕರಿಸಿ, ನಿಮ್ಮ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದರು.

ದುರ್ಗೇನಹಳ್ಳಿ ಸೇರಿದಂತೆ ಕೆಲವೊಂದು ಹಳ್ಳಿಗಳಲ್ಲಿ  ಚರಂಡಿ ಸಮಸ್ಯೆ ಕಾಡುತ್ತಿದ್ದು, ಇದನ್ನು ಪರಿಹರಿಸಲು ನರೇಗಾದ ಮೂಲಕ ಚರಂಡಿ ಕಾಮಗಾರಿಯನ್ನು  ಮಾಡಬೇಕಾಗುತ್ತದೆ. ಆದರೆ, ನರೇಗಾ ಮೂಲಕ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದನ್ನು ಅಧಿಕಾರಗಳೊಂದಿಗೆ ಚರ್ಚಿಸಿ  ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಸ್ವಚ್ಛವಾಹಿನಿಗೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಪನ್ಮೂಲದ ಕೊರೆತೆ ಉಂಟಾಗಿದ್ದು, ಈ ಬಗ್ಗೆ  ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗಿದೆ.  ಈ ಬಗ್ಗೆ ಕೂಡಲೇ ಕ್ರಮವಹಿಸಲಾಗುವಿದು ಎಂದು  ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಈ ವೇಳೆ ನರೇಗಾ, ಅರಣ್ಯಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಕೂಲ ಪಡೆದುಕೊಳ್ಳುಲು ಅಧಿಕಾರಿಗಳು  ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಗ್ರಾಮ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬಾ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಮುದ್ದುಕೃಷ್ಣಪ್ಪ, ಎಚ್.ನಾರಾಯಣಪ್ಪ, ಹಾಪ್ ಕಾಮ್ಸ್ ನಿರ್ದೇಶಕ ಕದ್ರಪ್ಪ, ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು, ಪರಮೇಶ್, ಚಿಕ್ಕ ಕದ್ರಪ್ಪ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

7 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

7 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

15 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago