ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಹಾಡೋನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನ ಗುರುತಿಸಿ ಪಟ್ಟಿ ಮಾಡಲಾಗಿದೆ, ಆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ಆಯಾ ಗ್ರಾಮಗಳ ಗ್ರಾಮಸ್ಥರಿಂದ ಸಾಕಷ್ಟು ಸಮಸ್ಯೆಗಳ ದೂರುಗಳು ಕೇಳಿಬಂದಿದ್ದು, ಎಲ್ಲಾ ದೂರಗಳನ್ನು ಆಲಿಸಿದ್ದೇವೆ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಪತ್ರಮುಖೇನ ರವಾನಿಸಿ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿಯಡಿಯಲ್ಲಿ ಬರುವ ಸವಲತ್ತು ಪಡೆಯಲು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಖಂಡಿತವಾಗಿಯೂ ಸವಲತ್ತು ಸಿಗುತ್ತದೆ. ಆದ್ದರಿಂದ ಅಗತ್ಯ ದಾಖಲೆಗಳನ್ನು ಕೊಟ್ಟು ಪಂಚಾಯಿತಿಯ ಸಿಬ್ಬಂದಿಗೆ ಸಹಕರಿಸಿ, ನಿಮ್ಮ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದರು.

ದುರ್ಗೇನಹಳ್ಳಿ ಸೇರಿದಂತೆ ಕೆಲವೊಂದು ಹಳ್ಳಿಗಳಲ್ಲಿ  ಚರಂಡಿ ಸಮಸ್ಯೆ ಕಾಡುತ್ತಿದ್ದು, ಇದನ್ನು ಪರಿಹರಿಸಲು ನರೇಗಾದ ಮೂಲಕ ಚರಂಡಿ ಕಾಮಗಾರಿಯನ್ನು  ಮಾಡಬೇಕಾಗುತ್ತದೆ. ಆದರೆ, ನರೇಗಾ ಮೂಲಕ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದನ್ನು ಅಧಿಕಾರಗಳೊಂದಿಗೆ ಚರ್ಚಿಸಿ  ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಸ್ವಚ್ಛವಾಹಿನಿಗೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಪನ್ಮೂಲದ ಕೊರೆತೆ ಉಂಟಾಗಿದ್ದು, ಈ ಬಗ್ಗೆ  ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗಿದೆ.  ಈ ಬಗ್ಗೆ ಕೂಡಲೇ ಕ್ರಮವಹಿಸಲಾಗುವಿದು ಎಂದು  ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಈ ವೇಳೆ ನರೇಗಾ, ಅರಣ್ಯಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಕೂಲ ಪಡೆದುಕೊಳ್ಳುಲು ಅಧಿಕಾರಿಗಳು  ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಗ್ರಾಮ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬಾ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಮುದ್ದುಕೃಷ್ಣಪ್ಪ, ಎಚ್.ನಾರಾಯಣಪ್ಪ, ಹಾಪ್ ಕಾಮ್ಸ್ ನಿರ್ದೇಶಕ ಕದ್ರಪ್ಪ, ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು, ಪರಮೇಶ್, ಚಿಕ್ಕ ಕದ್ರಪ್ಪ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

59 minutes ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

3 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

4 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

18 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

20 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

23 hours ago