ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು.

ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ನಡೆದ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

ಹಾಡೋನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನ ಗುರುತಿಸಿ ಪಟ್ಟಿ ಮಾಡಲಾಗಿದೆ, ಆ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ಆಯಾ ಗ್ರಾಮಗಳ ಗ್ರಾಮಸ್ಥರಿಂದ ಸಾಕಷ್ಟು ಸಮಸ್ಯೆಗಳ ದೂರುಗಳು ಕೇಳಿಬಂದಿದ್ದು, ಎಲ್ಲಾ ದೂರಗಳನ್ನು ಆಲಿಸಿದ್ದೇವೆ ಕೂಡಲೇ ಸಂಬಂಧಿಸಿದ ಇಲಾಖೆಗಳಿಗೆ ಪತ್ರಮುಖೇನ ರವಾನಿಸಿ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿಯಡಿಯಲ್ಲಿ ಬರುವ ಸವಲತ್ತು ಪಡೆಯಲು ಸೂಕ್ತ ದಾಖಲಾತಿಗಳನ್ನು ಒದಗಿಸಿದರೆ ಖಂಡಿತವಾಗಿಯೂ ಸವಲತ್ತು ಸಿಗುತ್ತದೆ. ಆದ್ದರಿಂದ ಅಗತ್ಯ ದಾಖಲೆಗಳನ್ನು ಕೊಟ್ಟು ಪಂಚಾಯಿತಿಯ ಸಿಬ್ಬಂದಿಗೆ ಸಹಕರಿಸಿ, ನಿಮ್ಮ ಕೆಲಸಗಳು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದರು.

ದುರ್ಗೇನಹಳ್ಳಿ ಸೇರಿದಂತೆ ಕೆಲವೊಂದು ಹಳ್ಳಿಗಳಲ್ಲಿ  ಚರಂಡಿ ಸಮಸ್ಯೆ ಕಾಡುತ್ತಿದ್ದು, ಇದನ್ನು ಪರಿಹರಿಸಲು ನರೇಗಾದ ಮೂಲಕ ಚರಂಡಿ ಕಾಮಗಾರಿಯನ್ನು  ಮಾಡಬೇಕಾಗುತ್ತದೆ. ಆದರೆ, ನರೇಗಾ ಮೂಲಕ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಇದನ್ನು ಅಧಿಕಾರಗಳೊಂದಿಗೆ ಚರ್ಚಿಸಿ  ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಸ್ವಚ್ಛವಾಹಿನಿಗೆ ಅಗತ್ಯವಾದ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಪನ್ಮೂಲದ ಕೊರೆತೆ ಉಂಟಾಗಿದ್ದು, ಈ ಬಗ್ಗೆ  ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗಿದೆ.  ಈ ಬಗ್ಗೆ ಕೂಡಲೇ ಕ್ರಮವಹಿಸಲಾಗುವಿದು ಎಂದು  ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಈ ವೇಳೆ ನರೇಗಾ, ಅರಣ್ಯಇಲಾಖೆ, ಕೃಷಿ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಅನುಕೂಲ ಪಡೆದುಕೊಳ್ಳುಲು ಅಧಿಕಾರಿಗಳು  ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಗ್ರಾಮ ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮಾಂಜನೇಯ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರಮ್ಯಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯಮ್ಮ, ನೋಡಲ್ ಅಧಿಕಾರಿ ರೇಷ್ಮೆ ಇಲಾಖೆಯ ಗಿರಿಜಾಂಬಾ, ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಆರ್.ಮುದ್ದುಕೃಷ್ಣಪ್ಪ, ಎಚ್.ನಾರಾಯಣಪ್ಪ, ಹಾಪ್ ಕಾಮ್ಸ್ ನಿರ್ದೇಶಕ ಕದ್ರಪ್ಪ, ಗ್ರಾಮ ಪಂಚಾಯತಿ ಸದಸ್ಯ ಮುನಿರಾಜು, ಪರಮೇಶ್, ಚಿಕ್ಕ ಕದ್ರಪ್ಪ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಜರಿದ್ದರು

Ramesh Babu

Journalist

Recent Posts

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 hour ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

2 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

3 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

10 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

13 hours ago