ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು, ರಿಪೇರಿ ಮಾಡಲು ಟ್ರಾನ್ಸ್ ಫಾರ್ಮ್ ಏರಿದ್ದಾನೆ, ಈ ವೇಳೆ ವಿದ್ಯುತ್ ಪ್ರವಹಿಸಿ ರೈತ ಟ್ರಾನ್ಸ್ ಫಾರ್ಮ್ ನಲ್ಲಿಯೇ ಸಾವನ್ನಪ್ಪಿದ್ದಾನೆ
ದೊಡ್ಡಬಳ್ಳಾಪುರ ತಾಲೂಕು ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಗಳಾಪುರದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಗ್ರಾಮದ ರಂಗಪ್ಪ (42) ಸಾವನ್ನಪ್ಪಿದ್ದಾನೆ, ಮೃತ ವ್ಯಕ್ತಿಗೆ ಮದುವೆಯಾಗಿದ್ದು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ನಿನ್ನೆ ಸಂಜೆ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು, ರಾತ್ರಿ ವಿದ್ಯುತ್ ಸಂಪರ್ಕದ ಅವಶ್ಯಕತೆ ಇತ್ತು, ಹಾಲಿನ ಡೈರಿಗೆ ಹಾಲು ಹಾಕಿ ಬಂದ ಆತ, ಮಳೆಯಲ್ಲೇ ತನ್ನ ಜಮೀನಿನಲ್ಲಿದ್ದ ಟ್ರಾನ್ಸ್ ಫಾರ್ಮ್ ಗೆ ಕಬ್ಬಿಣದ ಏಣಿ ಹಾಕಿಕೊಂಡು ಹತ್ತಿ ವಿದ್ಯುತ್ ಸರಿಪಡಿಸುತ್ತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ತಲೆಗೆ ಶಾಕ್ ಹೊಡೆದಿದೆ… ತಲೆ ಹಾಗೂ ಮೈಭಾಗಗಳು ಸುಟ್ಟು ಹೋಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ…
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…