ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು, ರಿಪೇರಿ ಮಾಡಲು ಟ್ರಾನ್ಸ್ ಫಾರ್ಮ್ ಏರಿದ್ದಾನೆ, ಈ ವೇಳೆ ವಿದ್ಯುತ್ ಪ್ರವಹಿಸಿ ರೈತ ಟ್ರಾನ್ಸ್ ಫಾರ್ಮ್ ನಲ್ಲಿಯೇ ಸಾವನ್ನಪ್ಪಿದ್ದಾನೆ
ದೊಡ್ಡಬಳ್ಳಾಪುರ ತಾಲೂಕು ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಗಳಾಪುರದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಗ್ರಾಮದ ರಂಗಪ್ಪ (42) ಸಾವನ್ನಪ್ಪಿದ್ದಾನೆ, ಮೃತ ವ್ಯಕ್ತಿಗೆ ಮದುವೆಯಾಗಿದ್ದು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ನಿನ್ನೆ ಸಂಜೆ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು, ರಾತ್ರಿ ವಿದ್ಯುತ್ ಸಂಪರ್ಕದ ಅವಶ್ಯಕತೆ ಇತ್ತು, ಹಾಲಿನ ಡೈರಿಗೆ ಹಾಲು ಹಾಕಿ ಬಂದ ಆತ, ಮಳೆಯಲ್ಲೇ ತನ್ನ ಜಮೀನಿನಲ್ಲಿದ್ದ ಟ್ರಾನ್ಸ್ ಫಾರ್ಮ್ ಗೆ ಕಬ್ಬಿಣದ ಏಣಿ ಹಾಕಿಕೊಂಡು ಹತ್ತಿ ವಿದ್ಯುತ್ ಸರಿಪಡಿಸುತ್ತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ತಲೆಗೆ ಶಾಕ್ ಹೊಡೆದಿದೆ… ತಲೆ ಹಾಗೂ ಮೈಭಾಗಗಳು ಸುಟ್ಟು ಹೋಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ…
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…