ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು, ರಿಪೇರಿ ಮಾಡಲು ಟ್ರಾನ್ಸ್ ಫಾರ್ಮ್ ಏರಿದ್ದಾನೆ, ಈ ವೇಳೆ ವಿದ್ಯುತ್ ಪ್ರವಹಿಸಿ ರೈತ ಟ್ರಾನ್ಸ್ ಫಾರ್ಮ್ ನಲ್ಲಿಯೇ ಸಾವನ್ನಪ್ಪಿದ್ದಾನೆ
ದೊಡ್ಡಬಳ್ಳಾಪುರ ತಾಲೂಕು ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಗಳಾಪುರದಲ್ಲಿ ಕಳೆದ ರಾತ್ರಿ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಗ್ರಾಮದ ರಂಗಪ್ಪ (42) ಸಾವನ್ನಪ್ಪಿದ್ದಾನೆ, ಮೃತ ವ್ಯಕ್ತಿಗೆ ಮದುವೆಯಾಗಿದ್ದು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ನಿನ್ನೆ ಸಂಜೆ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು, ರಾತ್ರಿ ವಿದ್ಯುತ್ ಸಂಪರ್ಕದ ಅವಶ್ಯಕತೆ ಇತ್ತು, ಹಾಲಿನ ಡೈರಿಗೆ ಹಾಲು ಹಾಕಿ ಬಂದ ಆತ, ಮಳೆಯಲ್ಲೇ ತನ್ನ ಜಮೀನಿನಲ್ಲಿದ್ದ ಟ್ರಾನ್ಸ್ ಫಾರ್ಮ್ ಗೆ ಕಬ್ಬಿಣದ ಏಣಿ ಹಾಕಿಕೊಂಡು ಹತ್ತಿ ವಿದ್ಯುತ್ ಸರಿಪಡಿಸುತ್ತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ತಲೆಗೆ ಶಾಕ್ ಹೊಡೆದಿದೆ… ತಲೆ ಹಾಗೂ ಮೈಭಾಗಗಳು ಸುಟ್ಟು ಹೋಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ…
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…