ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

8 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

15 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

16 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago