ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

3 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

5 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

5 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

8 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

12 hours ago