ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

5 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

5 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

17 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

20 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

21 hours ago