ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

21 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago