ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

15 minutes ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

2 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

9 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

17 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

18 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago