ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

10 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago