ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ

ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಎಲ್ಲಾ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಡುವ ಆಚರಣೆ ದೊಡ್ಡಬಳ್ಳಾಪುರ ತಾಲೂಕು ಸಾಸಲು ಹೋಬಳಿ ಹೊಸಹಳ್ಳಿ ಪೋಸ್ಟ್ ವ್ಯಾಪ್ತಿಯಲ್ಲಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿಂದು ಅದ್ಧೂರಿಯಾಗಿ ನಡೆಯಿತು.

ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ.

ಈ ಆಚರಣೆಯನ್ನು ಸುಮಾರು 25 ವರ್ಷಗಳ ಹಿಂದೆ ಮಾಡಿಲಾಗಿತ್ತು. ಇದೀಗ ಇಂದು ಊರಿನ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡಲಾಗಿದೆ.

ಊರ ಹೊರವಲಯದಲ್ಲಿದ್ದುಕೊಂಡು ಊರನ್ನು ಕಾಪಾಡುತ್ತಿರುವ ವರ್ಪಣಮ್ಮ ದೇವಸ್ಥಾನ ಬಳಿ ಹೋಗಿ ಸಣ್ಣಪುಟ್ಟ ಶೆಡ್ ನಿರ್ಮಿಸಿಕೊಂಡು‌ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸೇವನೆ ಮಾಡಿಕೊಂಡು ಒಂದು ದಿನ ಪೂರ್ತಿ ಅಲ್ಲೇ ಗ್ರಾಮಸ್ಥರು ಹಾಗೂ ತಮ್ಮ ಸಾಕು ಪ್ರಾಣಿಗಳ ಸಮೇತ ವಾಸ್ತವ್ಯ ಹೂಡಿದ್ದರು.

ಈ ಆಚರಣೆ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಪ್ರಾಚೀನ ಕಾಲದಿಂದಲೂ ಚಾಲ್ತಿಯಲ್ಲಿದ್ದು, ಅದನ್ನು ಪ್ರಸ್ತುತ ಗ್ರಾಮಸ್ಥರೆಲ್ಲಾ ಸೇರಿ ಆಚರಣೆ ಮಾಡುತ್ತಿದ್ದಾರೆ.

ಒಟ್ಟಾರೆ, ಈ ವಿಚಿತ್ರ ಆಚರಣೆಯಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಸಂತೋಷ, ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

4 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

5 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

13 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago