Categories: ಬೆಳಗಾವಿ

ಗ್ರಾಮದ ಸಮಸ್ಯೆ ಹೇಳಿದವನ ಬೆನ್ನು ಕಚ್ಚಿದ ಗ್ರಾಮ ಪಂಚಾಯಿತಿ ಅಧ್ಯಕ್ಷ…!

ಗ್ರಾಮಸ ಸಮಸ್ಯೆಯನ್ನ ಬಗೆಹರಿಸುವಂತೆ ಹೇಳಿದ ಗ್ರಾಮದ ವ್ಯಕ್ತಿಯ ಬೆನ್ನು ಕ*ಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂಧೋಗಿ ಗ್ರಾಮದಲ್ಲಿ ನಡೆದಿದೆ. ಶಿಂಧೋಗಿ ಗ್ರಾಮ ಪಂಚಾಯತ್ ಅಧ್ಯಕ್ಷ ದುರ್ಗಪ್ಪ ಟೋಪೋಜಿ, ಆತನ ಸಂಬಂಧಿಗಳಿಂದ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಮನಬಂದಂತೆ ಚಪ್ಪಲಿಯಿಂದ ಹೊಡೆದು ಹ*ಲ್ಲೆಗೈಯಲಾಗಿದೆ ಎಂದು ಗ್ರಾಮದ ನಿವಾಸಿ ಹನುಮಂತ ಕರಿಕಟ್ಟಿ(30) ಆರೋಪಿಸಿದ್ದಾರೆ.

ಶಾಲೆ ಪಕ್ಕದಲ್ಲಿರೋ ರಸ್ತೆ ಮೇಲೆ ನಿಲ್ಲುವ ಚರಂಡಿ ನೀರಿನ ಸಮಸ್ಯೆ ಬಗ್ಗೆ ಪಿಡಿಓ ಗಮನಕ್ಕೆ ತಂದಿದ್ದ ಹನುಮಂತ. ರಸ್ತೆ ಮೇಲೆ ನಿಂತ ಚರಂಡಿ ನೀರಿನಲ್ಲೇ ಮಕ್ಕಳು ಶಾಲೆ, ಅಂಗನವಾಡಿಗೆ ನಡೆದುಕೊಂಡು ಹೋಗ್ತಾರೆ. ಇದನ್ನ ದುರಸ್ತಿ ಮಾಡುವಂತೆ ಪಿಡಿಓಗೆ ಮನವಿ ಮಾಡಿದ್ದರು‌.

ಇದೇ ವೇಳೆ ಅಧ್ಯಕ್ಷ ದೂರುದಾರ ಮೇಲೆ ಚಪ್ಪಲಿಯಿಂದ ಹ*ಲ್ಲೆಗೈದು ಬೆನ್ನು ಕ*ಚ್ಚಿ ವಿಕೃತಿ ಮೆರೆದಿದ್ದಾರೆ. ಪಿಡಿಓ ಮುಂದೆಯೇ ಅಧ್ಯಕ್ಷ ಸೇರಿ ಆತನ ಸಂಬಂಧಿಗಳು ಹ*ಲ್ಲೆ ಮಾಡಿದ್ದಾರೆ. ಬಳಿಕ ಮನೆಗೆ ನುಗ್ಗಿ ತಾಯಿ, ನಮ್ಮ ಅಜ್ಜಿಯ ಮೇಲೆ ಬಡಿಗೆ, ಸಲಕಿಯಿಂದ ಹೊ*ಡೆದಿದ್ದಾರೆ.

ನಮ್ಮ ತಾಯಿಯ ತಾಳಿಯನ್ನೂ ಕಿತ್ತುಹಾಕಿದ್ದಾರೆ ಎಂದು ಹನುಮಂತ ಆರೋಪಿಸಿದ್ದಾರೆ. ಈ ಹಿಂದೆ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಕ್ರಮ‌ಗಳ ಬಗ್ಗೆ ಪ್ರಶ್ನೆ ಮಾಡಿದ್ದೆ. ಅದೇ ದ್ವೇಷ ಇಟ್ಟುಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಹುನುಮಂತ ಹೇಳುತ್ತಿದ್ದಾರೆ.

ಸದ್ಯ ಗಾಯಗೊಂಡ ಹನುಮಂತ, ವೃದ್ಧೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago