Categories: ಬೆಳಗಾವಿ

ಗ್ರಾಮದ ಸಮಸ್ಯೆ ಹೇಳಿದವನ ಬೆನ್ನು ಕಚ್ಚಿದ ಗ್ರಾಮ ಪಂಚಾಯಿತಿ ಅಧ್ಯಕ್ಷ…!

ಗ್ರಾಮಸ ಸಮಸ್ಯೆಯನ್ನ ಬಗೆಹರಿಸುವಂತೆ ಹೇಳಿದ ಗ್ರಾಮದ ವ್ಯಕ್ತಿಯ ಬೆನ್ನು ಕ*ಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂಧೋಗಿ ಗ್ರಾಮದಲ್ಲಿ ನಡೆದಿದೆ. ಶಿಂಧೋಗಿ ಗ್ರಾಮ ಪಂಚಾಯತ್ ಅಧ್ಯಕ್ಷ ದುರ್ಗಪ್ಪ ಟೋಪೋಜಿ, ಆತನ ಸಂಬಂಧಿಗಳಿಂದ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಮನಬಂದಂತೆ ಚಪ್ಪಲಿಯಿಂದ ಹೊಡೆದು ಹ*ಲ್ಲೆಗೈಯಲಾಗಿದೆ ಎಂದು ಗ್ರಾಮದ ನಿವಾಸಿ ಹನುಮಂತ ಕರಿಕಟ್ಟಿ(30) ಆರೋಪಿಸಿದ್ದಾರೆ.

ಶಾಲೆ ಪಕ್ಕದಲ್ಲಿರೋ ರಸ್ತೆ ಮೇಲೆ ನಿಲ್ಲುವ ಚರಂಡಿ ನೀರಿನ ಸಮಸ್ಯೆ ಬಗ್ಗೆ ಪಿಡಿಓ ಗಮನಕ್ಕೆ ತಂದಿದ್ದ ಹನುಮಂತ. ರಸ್ತೆ ಮೇಲೆ ನಿಂತ ಚರಂಡಿ ನೀರಿನಲ್ಲೇ ಮಕ್ಕಳು ಶಾಲೆ, ಅಂಗನವಾಡಿಗೆ ನಡೆದುಕೊಂಡು ಹೋಗ್ತಾರೆ. ಇದನ್ನ ದುರಸ್ತಿ ಮಾಡುವಂತೆ ಪಿಡಿಓಗೆ ಮನವಿ ಮಾಡಿದ್ದರು‌.

ಇದೇ ವೇಳೆ ಅಧ್ಯಕ್ಷ ದೂರುದಾರ ಮೇಲೆ ಚಪ್ಪಲಿಯಿಂದ ಹ*ಲ್ಲೆಗೈದು ಬೆನ್ನು ಕ*ಚ್ಚಿ ವಿಕೃತಿ ಮೆರೆದಿದ್ದಾರೆ. ಪಿಡಿಓ ಮುಂದೆಯೇ ಅಧ್ಯಕ್ಷ ಸೇರಿ ಆತನ ಸಂಬಂಧಿಗಳು ಹ*ಲ್ಲೆ ಮಾಡಿದ್ದಾರೆ. ಬಳಿಕ ಮನೆಗೆ ನುಗ್ಗಿ ತಾಯಿ, ನಮ್ಮ ಅಜ್ಜಿಯ ಮೇಲೆ ಬಡಿಗೆ, ಸಲಕಿಯಿಂದ ಹೊ*ಡೆದಿದ್ದಾರೆ.

ನಮ್ಮ ತಾಯಿಯ ತಾಳಿಯನ್ನೂ ಕಿತ್ತುಹಾಕಿದ್ದಾರೆ ಎಂದು ಹನುಮಂತ ಆರೋಪಿಸಿದ್ದಾರೆ. ಈ ಹಿಂದೆ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಕ್ರಮ‌ಗಳ ಬಗ್ಗೆ ಪ್ರಶ್ನೆ ಮಾಡಿದ್ದೆ. ಅದೇ ದ್ವೇಷ ಇಟ್ಟುಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಹುನುಮಂತ ಹೇಳುತ್ತಿದ್ದಾರೆ.

ಸದ್ಯ ಗಾಯಗೊಂಡ ಹನುಮಂತ, ವೃದ್ಧೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

9 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

12 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

23 hours ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

1 day ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

2 days ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

2 days ago