Categories: ಬೆಳಗಾವಿ

ಗ್ರಾಮದ ಸಮಸ್ಯೆ ಹೇಳಿದವನ ಬೆನ್ನು ಕಚ್ಚಿದ ಗ್ರಾಮ ಪಂಚಾಯಿತಿ ಅಧ್ಯಕ್ಷ…!

ಗ್ರಾಮಸ ಸಮಸ್ಯೆಯನ್ನ ಬಗೆಹರಿಸುವಂತೆ ಹೇಳಿದ ಗ್ರಾಮದ ವ್ಯಕ್ತಿಯ ಬೆನ್ನು ಕ*ಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂಧೋಗಿ ಗ್ರಾಮದಲ್ಲಿ ನಡೆದಿದೆ. ಶಿಂಧೋಗಿ ಗ್ರಾಮ ಪಂಚಾಯತ್ ಅಧ್ಯಕ್ಷ ದುರ್ಗಪ್ಪ ಟೋಪೋಜಿ, ಆತನ ಸಂಬಂಧಿಗಳಿಂದ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಮನಬಂದಂತೆ ಚಪ್ಪಲಿಯಿಂದ ಹೊಡೆದು ಹ*ಲ್ಲೆಗೈಯಲಾಗಿದೆ ಎಂದು ಗ್ರಾಮದ ನಿವಾಸಿ ಹನುಮಂತ ಕರಿಕಟ್ಟಿ(30) ಆರೋಪಿಸಿದ್ದಾರೆ.

ಶಾಲೆ ಪಕ್ಕದಲ್ಲಿರೋ ರಸ್ತೆ ಮೇಲೆ ನಿಲ್ಲುವ ಚರಂಡಿ ನೀರಿನ ಸಮಸ್ಯೆ ಬಗ್ಗೆ ಪಿಡಿಓ ಗಮನಕ್ಕೆ ತಂದಿದ್ದ ಹನುಮಂತ. ರಸ್ತೆ ಮೇಲೆ ನಿಂತ ಚರಂಡಿ ನೀರಿನಲ್ಲೇ ಮಕ್ಕಳು ಶಾಲೆ, ಅಂಗನವಾಡಿಗೆ ನಡೆದುಕೊಂಡು ಹೋಗ್ತಾರೆ. ಇದನ್ನ ದುರಸ್ತಿ ಮಾಡುವಂತೆ ಪಿಡಿಓಗೆ ಮನವಿ ಮಾಡಿದ್ದರು‌.

ಇದೇ ವೇಳೆ ಅಧ್ಯಕ್ಷ ದೂರುದಾರ ಮೇಲೆ ಚಪ್ಪಲಿಯಿಂದ ಹ*ಲ್ಲೆಗೈದು ಬೆನ್ನು ಕ*ಚ್ಚಿ ವಿಕೃತಿ ಮೆರೆದಿದ್ದಾರೆ. ಪಿಡಿಓ ಮುಂದೆಯೇ ಅಧ್ಯಕ್ಷ ಸೇರಿ ಆತನ ಸಂಬಂಧಿಗಳು ಹ*ಲ್ಲೆ ಮಾಡಿದ್ದಾರೆ. ಬಳಿಕ ಮನೆಗೆ ನುಗ್ಗಿ ತಾಯಿ, ನಮ್ಮ ಅಜ್ಜಿಯ ಮೇಲೆ ಬಡಿಗೆ, ಸಲಕಿಯಿಂದ ಹೊ*ಡೆದಿದ್ದಾರೆ.

ನಮ್ಮ ತಾಯಿಯ ತಾಳಿಯನ್ನೂ ಕಿತ್ತುಹಾಕಿದ್ದಾರೆ ಎಂದು ಹನುಮಂತ ಆರೋಪಿಸಿದ್ದಾರೆ. ಈ ಹಿಂದೆ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಕ್ರಮ‌ಗಳ ಬಗ್ಗೆ ಪ್ರಶ್ನೆ ಮಾಡಿದ್ದೆ. ಅದೇ ದ್ವೇಷ ಇಟ್ಟುಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಹುನುಮಂತ ಹೇಳುತ್ತಿದ್ದಾರೆ.

ಸದ್ಯ ಗಾಯಗೊಂಡ ಹನುಮಂತ, ವೃದ್ಧೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

17 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

19 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago