Categories: ಬೆಳಗಾವಿ

ಗ್ರಾಮದ ಸಮಸ್ಯೆ ಹೇಳಿದವನ ಬೆನ್ನು ಕಚ್ಚಿದ ಗ್ರಾಮ ಪಂಚಾಯಿತಿ ಅಧ್ಯಕ್ಷ…!

ಗ್ರಾಮಸ ಸಮಸ್ಯೆಯನ್ನ ಬಗೆಹರಿಸುವಂತೆ ಹೇಳಿದ ಗ್ರಾಮದ ವ್ಯಕ್ತಿಯ ಬೆನ್ನು ಕ*ಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂಧೋಗಿ ಗ್ರಾಮದಲ್ಲಿ ನಡೆದಿದೆ. ಶಿಂಧೋಗಿ ಗ್ರಾಮ ಪಂಚಾಯತ್ ಅಧ್ಯಕ್ಷ ದುರ್ಗಪ್ಪ ಟೋಪೋಜಿ, ಆತನ ಸಂಬಂಧಿಗಳಿಂದ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಮನಬಂದಂತೆ ಚಪ್ಪಲಿಯಿಂದ ಹೊಡೆದು ಹ*ಲ್ಲೆಗೈಯಲಾಗಿದೆ ಎಂದು ಗ್ರಾಮದ ನಿವಾಸಿ ಹನುಮಂತ ಕರಿಕಟ್ಟಿ(30) ಆರೋಪಿಸಿದ್ದಾರೆ.

ಶಾಲೆ ಪಕ್ಕದಲ್ಲಿರೋ ರಸ್ತೆ ಮೇಲೆ ನಿಲ್ಲುವ ಚರಂಡಿ ನೀರಿನ ಸಮಸ್ಯೆ ಬಗ್ಗೆ ಪಿಡಿಓ ಗಮನಕ್ಕೆ ತಂದಿದ್ದ ಹನುಮಂತ. ರಸ್ತೆ ಮೇಲೆ ನಿಂತ ಚರಂಡಿ ನೀರಿನಲ್ಲೇ ಮಕ್ಕಳು ಶಾಲೆ, ಅಂಗನವಾಡಿಗೆ ನಡೆದುಕೊಂಡು ಹೋಗ್ತಾರೆ. ಇದನ್ನ ದುರಸ್ತಿ ಮಾಡುವಂತೆ ಪಿಡಿಓಗೆ ಮನವಿ ಮಾಡಿದ್ದರು‌.

ಇದೇ ವೇಳೆ ಅಧ್ಯಕ್ಷ ದೂರುದಾರ ಮೇಲೆ ಚಪ್ಪಲಿಯಿಂದ ಹ*ಲ್ಲೆಗೈದು ಬೆನ್ನು ಕ*ಚ್ಚಿ ವಿಕೃತಿ ಮೆರೆದಿದ್ದಾರೆ. ಪಿಡಿಓ ಮುಂದೆಯೇ ಅಧ್ಯಕ್ಷ ಸೇರಿ ಆತನ ಸಂಬಂಧಿಗಳು ಹ*ಲ್ಲೆ ಮಾಡಿದ್ದಾರೆ. ಬಳಿಕ ಮನೆಗೆ ನುಗ್ಗಿ ತಾಯಿ, ನಮ್ಮ ಅಜ್ಜಿಯ ಮೇಲೆ ಬಡಿಗೆ, ಸಲಕಿಯಿಂದ ಹೊ*ಡೆದಿದ್ದಾರೆ.

ನಮ್ಮ ತಾಯಿಯ ತಾಳಿಯನ್ನೂ ಕಿತ್ತುಹಾಕಿದ್ದಾರೆ ಎಂದು ಹನುಮಂತ ಆರೋಪಿಸಿದ್ದಾರೆ. ಈ ಹಿಂದೆ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಕ್ರಮ‌ಗಳ ಬಗ್ಗೆ ಪ್ರಶ್ನೆ ಮಾಡಿದ್ದೆ. ಅದೇ ದ್ವೇಷ ಇಟ್ಟುಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಹುನುಮಂತ ಹೇಳುತ್ತಿದ್ದಾರೆ.

ಸದ್ಯ ಗಾಯಗೊಂಡ ಹನುಮಂತ, ವೃದ್ಧೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ನಗರಸಭೆ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…

2 hours ago

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

11 hours ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

1 day ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

3 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

3 days ago