Categories: Home

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ ಅನುದಾನ ಕೊಡಬೇಕಿರುವುದು ಸರ್ಕಾರದ ಆರ್ಥಿಕ ಸ್ಥಿತಿ ಹೇಗಿದೆ ಎಂಬುದನ್ನ ತೋರಿಸುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜು ಕಿಡಿಕಾರಿದರು.

ನಗರದಲ್ಲಿ ಗ್ರಾಮಾಂತರ ಠಾಣೆಗೆ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಪಾತ್ರ ಮುಖ್ಯವಾಗಿದೆ. ಅದಕ್ಕಾಗಿ ಸಾರ್ವಜನಿಕರ ಸೇವೆಗಾಗಿ ಪ್ರತಿ ಠಾಣೆಗೊಂದು ವಾಹನ ಅವಶ್ಯವಾಗಿದೆ ಎಂದು ಹಿಂದಿನ ಪೊಲೀಸ್ ವರಿಷ್ಠಾಧಿಕಾರಿಗಳು ಮನವಿ ಮಾಡಿದ್ದರು. ಹೀಗಾಗಿ ಶಾಸಕರ ಪ್ರದೇಶಾಭಿವೃದ್ಧ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ವಾಹನ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಗೆ ವಾಹನಗಳು ಅವಶ್ಯ, ಇದನ್ನರಿತು ವಾಹನವನ್ನು ಒದಗಿಸಲಾಗಿದೆ. ಪೊಲೀಸರಿಗೆ ನೈತಿಕ ಬೆಂಬಲ ನೀಡಬೇಕು, ನೆಮ್ಮದಿ ಯಿಂದ ನಾವು ನಿದ್ರಿಸಲು ಪೊಲೀಸರು ಕಾರಣ, ಅವರು ಪ್ರಾಮಾಣಿಕ ಸೇವೆ ನೀಡುತ್ತಿದ್ದಾರೆ, ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅವರಿಗೆ ಬೆಂಬಲ ನೀಡಬೇಕು ಎಂದರು.

ಈ ವೇಳೆ ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಎಂ.ಬಿ ನವೀನ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ನಾಗೇಶ್, ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ಹಂಸಪ್ರಿಯಾ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

8 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

14 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

15 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago