Categories: Home

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ ಅನುದಾನ ಕೊಡಬೇಕಿರುವುದು ಸರ್ಕಾರದ ಆರ್ಥಿಕ ಸ್ಥಿತಿ ಹೇಗಿದೆ ಎಂಬುದನ್ನ ತೋರಿಸುತ್ತಿದೆ ಎಂದು ಶಾಸಕ ಧೀರಜ್ ಮುನಿರಾಜು ಕಿಡಿಕಾರಿದರು.

ನಗರದಲ್ಲಿ ಗ್ರಾಮಾಂತರ ಠಾಣೆಗೆ ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಪಾತ್ರ ಮುಖ್ಯವಾಗಿದೆ. ಅದಕ್ಕಾಗಿ ಸಾರ್ವಜನಿಕರ ಸೇವೆಗಾಗಿ ಪ್ರತಿ ಠಾಣೆಗೊಂದು ವಾಹನ ಅವಶ್ಯವಾಗಿದೆ ಎಂದು ಹಿಂದಿನ ಪೊಲೀಸ್ ವರಿಷ್ಠಾಧಿಕಾರಿಗಳು ಮನವಿ ಮಾಡಿದ್ದರು. ಹೀಗಾಗಿ ಶಾಸಕರ ಪ್ರದೇಶಾಭಿವೃದ್ಧ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ವಾಹನ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಗೆ ವಾಹನಗಳು ಅವಶ್ಯ, ಇದನ್ನರಿತು ವಾಹನವನ್ನು ಒದಗಿಸಲಾಗಿದೆ. ಪೊಲೀಸರಿಗೆ ನೈತಿಕ ಬೆಂಬಲ ನೀಡಬೇಕು, ನೆಮ್ಮದಿ ಯಿಂದ ನಾವು ನಿದ್ರಿಸಲು ಪೊಲೀಸರು ಕಾರಣ, ಅವರು ಪ್ರಾಮಾಣಿಕ ಸೇವೆ ನೀಡುತ್ತಿದ್ದಾರೆ, ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅವರಿಗೆ ಬೆಂಬಲ ನೀಡಬೇಕು ಎಂದರು.

ಈ ವೇಳೆ ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಎಂ.ಬಿ ನವೀನ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ನಾಗೇಶ್, ನಗರಸಭಾ ಸದಸ್ಯರಾದ ಪದ್ಮನಾಭ, ಬಂತಿ ವೆಂಕಟೇಶ್, ಹಂಸಪ್ರಿಯಾ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

1 day ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

2 days ago