ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಲ್ಲಿ ವಿವಿಧ ರಾಜ್ಯಗಳ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸದಸ್ಯರಾಗಿರುತ್ತಾರೆ. ಲೋಕಸಭಾ ಸದಸ್ಯರಾದ ತಳಾರಿ ರಂಗಯ್ಯ, ಗೀತಾಬೇನ್ ವಜಾಸಿಂಗ್ ಬಾಯ್ ರಥ್ವಾ, ಮಹಮ್ಮದ್ ಜಾವೇದ್, ಎ.ಕೆ ಪಿ ಚಿನರಾಜ್, ವಿವೇಕ್ ನಾರಾಯಣ್, ಜನಾರ್ದನ ಮಿಶ್ರ ಹಾಗೂ ರಾಜ್ಯ ಸಭಾ ಸದಸ್ಯರಾದ ಮಹಮ್ಮದ್ ಅಬ್ದುಲ್ಲಾ, ಅಜಯ್ ಪ್ರತಾಪ್ ಸಿಂಗ್ ಸೇರಿ 8 ಜನ ಸಂಸದರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜಂಟಿ ಕಾರ್ಯದರ್ಶಿ ಡಿ.ಆರ್ ಶೇಖರ್ ಒಳಗೊಂಡ 9 ಜನ ಸದಸ್ಯರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮಕ್ಕೆ ಸಮಿತಿ ಸದಸ್ಯರನ್ನು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಸ್ವಾಗತಿಸಿ ಜಿಲ್ಲೆಯ ಬಗ್ಗೆ ಮಾಹಿತಿ ನೀಡಿದರು.ಸಂಜೀವಿನಿ ಸಂಘ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟ ವೀಕ್ಷಿಸಿದ ತಂಡವು, ನಂತರ ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆಗಳ ಪ್ರಗತಿ ಮಾಹಿತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಪ್ರದರ್ಶಿಸಿದ ಪಿ.ಪಿ.ಟಿ ಮೂಲಕ ಮಾಹಿತಿ ಪಡೆದುಕೊಂಡರು. ಕನ್ನಮಂಗಲ ಗ್ರಾಮಪಂಚಾಯಿತಿ ಆವರಣದಲ್ಲಿ ಇರುವ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿದರು.
ನಂತರ ಜಾಲಿಗೆ ಗ್ರಾಮ ಪಂಚಾಯಿತಿಯ ತಿಂಡ್ಲು ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ರಾಜ ಕಾಲುವೆ ಯನ್ನು ವೀಕ್ಷಿಸಿದರು. ಜುಟ್ಟನಹಳ್ಳಿಯಲ್ಲಿ ಸಂಜೀವಿನಿ ಸಂಘ ಮಹಿಳೆಯರು ನಡೆಸುತ್ತಿರುವ ಬಟ್ಟೆ ಅಂಗಡಿ ಹಾಗೂ ಗ್ರಾಮ ಪಂಚಾಯಿತಿಯ 15 ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾದ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.
ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಯೋಜನೆಯಡಿ ಬೆಳೆಸಿದ ದೇವನಹಳ್ಳಿಯ ಪ್ರಸಿದ್ಧ ಹಣ್ಣಾದ ಚಕ್ಕೊತ ಹಣ್ಣಿನ ಗಿಡಗಳನ್ನು ಪರಿಶೀಲಿಸಿ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಯನ್ನು ವೀಕ್ಷಿಸಿದರು. ಬೆಟ್ಟಕೋಟೆಯಲ್ಲಿ ರೇಷ್ಮೆ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಹಿಪ್ಪುನೇರಳೆ ಹೊಸನಾಟಿ, ನರ್ಸರಿ, ಹಿಪ್ಪುನೇರಳೆ ಮರ ಪದ್ಧತಿಯನ್ನು ಪರಿಶೀಲಿಸಿ, ರೇಷ್ಮೆಗೂಡಿನಿಂದ ತಯಾರಿಸಲಾದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…