ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯ ಸದಸ್ಯರ ಜಿಲ್ಲಾ ಭೇಟಿ: ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆ

ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ  ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಲ್ಲಿ ವಿವಿಧ ರಾಜ್ಯಗಳ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸದಸ್ಯರಾಗಿರುತ್ತಾರೆ. ಲೋಕಸಭಾ ಸದಸ್ಯರಾದ ತಳಾರಿ ರಂಗಯ್ಯ, ಗೀತಾಬೇನ್  ವಜಾಸಿಂಗ್ ಬಾಯ್ ರಥ್ವಾ, ಮಹಮ್ಮದ್ ಜಾವೇದ್, ಎ.ಕೆ ಪಿ ಚಿನರಾಜ್, ವಿವೇಕ್ ನಾರಾಯಣ್, ಜನಾರ್ದನ ಮಿಶ್ರ ಹಾಗೂ ರಾಜ್ಯ ಸಭಾ ಸದಸ್ಯರಾದ ಮಹಮ್ಮದ್ ಅಬ್ದುಲ್ಲಾ, ಅಜಯ್ ಪ್ರತಾಪ್ ಸಿಂಗ್ ಸೇರಿ 8 ಜನ ಸಂಸದರು ಹಾಗೂ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜಂಟಿ ಕಾರ್ಯದರ್ಶಿ ಡಿ.ಆರ್ ಶೇಖರ್ ಒಳಗೊಂಡ 9 ಜನ ಸದಸ್ಯರ ತಂಡ  ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮಕ್ಕೆ ಸಮಿತಿ ಸದಸ್ಯರನ್ನು  ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಸ್ವಾಗತಿಸಿ ಜಿಲ್ಲೆಯ ಬಗ್ಗೆ ಮಾಹಿತಿ ನೀಡಿದರು.ಸಂಜೀವಿನಿ ಸಂಘ ಮಹಿಳೆಯರು ತಯಾರಿಸಿದ  ಉತ್ಪನ್ನಗಳ ಮಾರಾಟ ವೀಕ್ಷಿಸಿದ ತಂಡವು, ನಂತರ ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆಗಳ ಪ್ರಗತಿ ಮಾಹಿತಿಯನ್ನು  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಪ್ರದರ್ಶಿಸಿದ ಪಿ.ಪಿ.ಟಿ ಮೂಲಕ ಮಾಹಿತಿ ಪಡೆದುಕೊಂಡರು. ಕನ್ನಮಂಗಲ ಗ್ರಾಮಪಂಚಾಯಿತಿ ಆವರಣದಲ್ಲಿ ಇರುವ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿದರು.

ನಂತರ ಜಾಲಿಗೆ ಗ್ರಾಮ ಪಂಚಾಯಿತಿಯ ತಿಂಡ್ಲು ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ರಾಜ ಕಾಲುವೆ ಯನ್ನು ವೀಕ್ಷಿಸಿದರು. ಜುಟ್ಟನಹಳ್ಳಿಯಲ್ಲಿ  ಸಂಜೀವಿನಿ ಸಂಘ ಮಹಿಳೆಯರು ನಡೆಸುತ್ತಿರುವ ಬಟ್ಟೆ ಅಂಗಡಿ ಹಾಗೂ ಗ್ರಾಮ ಪಂಚಾಯಿತಿಯ 15 ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾದ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

ಮಂಡಿಬೆಲೆ ಗ್ರಾಮ ಪಂಚಾಯಿತಿಯ ಮಂಡಿಬೆಲೆ ಗ್ರಾಮದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಸಸಿ ನೆಡುವ ಯೋಜನೆಯಡಿ ನಿರ್ಮಿಸಲಾಗಿರುವ ಶ್ರೀಗಂಧ ಮರಗಳ ನೆಡು ತೊಪುನ್ನು ವೀಕ್ಷಿಸಿದರು.

ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಯೋಜನೆಯಡಿ ಬೆಳೆಸಿದ ದೇವನಹಳ್ಳಿಯ ಪ್ರಸಿದ್ಧ ಹಣ್ಣಾದ ಚಕ್ಕೊತ ಹಣ್ಣಿನ ಗಿಡಗಳನ್ನು ಪರಿಶೀಲಿಸಿ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಯನ್ನು ವೀಕ್ಷಿಸಿದರು. ಬೆಟ್ಟಕೋಟೆಯಲ್ಲಿ  ರೇಷ್ಮೆ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಹಿಪ್ಪುನೇರಳೆ ಹೊಸನಾಟಿ, ನರ್ಸರಿ, ಹಿಪ್ಪುನೇರಳೆ ಮರ ಪದ್ಧತಿಯನ್ನು ಪರಿಶೀಲಿಸಿ, ರೇಷ್ಮೆಗೂಡಿನಿಂದ ತಯಾರಿಸಲಾದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ , ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತರು ಪವನ್ ಕುಮಾರ್ ಮಾಲಪಟಿ, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಸೇರಿದಂತೆ ಪಂಚಾಯತ್ ರಾಜ್ ಆಯುಕ್ತಾಲಯದ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago