ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಲ್ಲಿ ವಿವಿಧ ರಾಜ್ಯಗಳ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸದಸ್ಯರಾಗಿರುತ್ತಾರೆ. ಲೋಕಸಭಾ ಸದಸ್ಯರಾದ ತಳಾರಿ ರಂಗಯ್ಯ, ಗೀತಾಬೇನ್ ವಜಾಸಿಂಗ್ ಬಾಯ್ ರಥ್ವಾ, ಮಹಮ್ಮದ್ ಜಾವೇದ್, ಎ.ಕೆ ಪಿ ಚಿನರಾಜ್, ವಿವೇಕ್ ನಾರಾಯಣ್, ಜನಾರ್ದನ ಮಿಶ್ರ ಹಾಗೂ ರಾಜ್ಯ ಸಭಾ ಸದಸ್ಯರಾದ ಮಹಮ್ಮದ್ ಅಬ್ದುಲ್ಲಾ, ಅಜಯ್ ಪ್ರತಾಪ್ ಸಿಂಗ್ ಸೇರಿ 8 ಜನ ಸಂಸದರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜಂಟಿ ಕಾರ್ಯದರ್ಶಿ ಡಿ.ಆರ್ ಶೇಖರ್ ಒಳಗೊಂಡ 9 ಜನ ಸದಸ್ಯರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮಕ್ಕೆ ಸಮಿತಿ ಸದಸ್ಯರನ್ನು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಸ್ವಾಗತಿಸಿ ಜಿಲ್ಲೆಯ ಬಗ್ಗೆ ಮಾಹಿತಿ ನೀಡಿದರು.ಸಂಜೀವಿನಿ ಸಂಘ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟ ವೀಕ್ಷಿಸಿದ ತಂಡವು, ನಂತರ ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆಗಳ ಪ್ರಗತಿ ಮಾಹಿತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಪ್ರದರ್ಶಿಸಿದ ಪಿ.ಪಿ.ಟಿ ಮೂಲಕ ಮಾಹಿತಿ ಪಡೆದುಕೊಂಡರು. ಕನ್ನಮಂಗಲ ಗ್ರಾಮಪಂಚಾಯಿತಿ ಆವರಣದಲ್ಲಿ ಇರುವ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿದರು.
ನಂತರ ಜಾಲಿಗೆ ಗ್ರಾಮ ಪಂಚಾಯಿತಿಯ ತಿಂಡ್ಲು ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ರಾಜ ಕಾಲುವೆ ಯನ್ನು ವೀಕ್ಷಿಸಿದರು. ಜುಟ್ಟನಹಳ್ಳಿಯಲ್ಲಿ ಸಂಜೀವಿನಿ ಸಂಘ ಮಹಿಳೆಯರು ನಡೆಸುತ್ತಿರುವ ಬಟ್ಟೆ ಅಂಗಡಿ ಹಾಗೂ ಗ್ರಾಮ ಪಂಚಾಯಿತಿಯ 15 ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾದ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.
ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಯೋಜನೆಯಡಿ ಬೆಳೆಸಿದ ದೇವನಹಳ್ಳಿಯ ಪ್ರಸಿದ್ಧ ಹಣ್ಣಾದ ಚಕ್ಕೊತ ಹಣ್ಣಿನ ಗಿಡಗಳನ್ನು ಪರಿಶೀಲಿಸಿ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಯನ್ನು ವೀಕ್ಷಿಸಿದರು. ಬೆಟ್ಟಕೋಟೆಯಲ್ಲಿ ರೇಷ್ಮೆ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಹಿಪ್ಪುನೇರಳೆ ಹೊಸನಾಟಿ, ನರ್ಸರಿ, ಹಿಪ್ಪುನೇರಳೆ ಮರ ಪದ್ಧತಿಯನ್ನು ಪರಿಶೀಲಿಸಿ, ರೇಷ್ಮೆಗೂಡಿನಿಂದ ತಯಾರಿಸಲಾದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದರು.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…