ಕೇಂದ್ರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸ್ಥಾಯಿ ಸಮಿತಿಯಲ್ಲಿ ವಿವಿಧ ರಾಜ್ಯಗಳ ಲೋಕಸಭಾ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸದಸ್ಯರಾಗಿರುತ್ತಾರೆ. ಲೋಕಸಭಾ ಸದಸ್ಯರಾದ ತಳಾರಿ ರಂಗಯ್ಯ, ಗೀತಾಬೇನ್ ವಜಾಸಿಂಗ್ ಬಾಯ್ ರಥ್ವಾ, ಮಹಮ್ಮದ್ ಜಾವೇದ್, ಎ.ಕೆ ಪಿ ಚಿನರಾಜ್, ವಿವೇಕ್ ನಾರಾಯಣ್, ಜನಾರ್ದನ ಮಿಶ್ರ ಹಾಗೂ ರಾಜ್ಯ ಸಭಾ ಸದಸ್ಯರಾದ ಮಹಮ್ಮದ್ ಅಬ್ದುಲ್ಲಾ, ಅಜಯ್ ಪ್ರತಾಪ್ ಸಿಂಗ್ ಸೇರಿ 8 ಜನ ಸಂಸದರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜಂಟಿ ಕಾರ್ಯದರ್ಶಿ ಡಿ.ಆರ್ ಶೇಖರ್ ಒಳಗೊಂಡ 9 ಜನ ಸದಸ್ಯರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮಕ್ಕೆ ಸಮಿತಿ ಸದಸ್ಯರನ್ನು ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಸ್ವಾಗತಿಸಿ ಜಿಲ್ಲೆಯ ಬಗ್ಗೆ ಮಾಹಿತಿ ನೀಡಿದರು.ಸಂಜೀವಿನಿ ಸಂಘ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟ ವೀಕ್ಷಿಸಿದ ತಂಡವು, ನಂತರ ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆಗಳ ಪ್ರಗತಿ ಮಾಹಿತಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್ ಅವರು ಪ್ರದರ್ಶಿಸಿದ ಪಿ.ಪಿ.ಟಿ ಮೂಲಕ ಮಾಹಿತಿ ಪಡೆದುಕೊಂಡರು. ಕನ್ನಮಂಗಲ ಗ್ರಾಮಪಂಚಾಯಿತಿ ಆವರಣದಲ್ಲಿ ಇರುವ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ವೀಕ್ಷಿಸಿದರು.
ನಂತರ ಜಾಲಿಗೆ ಗ್ರಾಮ ಪಂಚಾಯಿತಿಯ ತಿಂಡ್ಲು ಗ್ರಾಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ರಾಜ ಕಾಲುವೆ ಯನ್ನು ವೀಕ್ಷಿಸಿದರು. ಜುಟ್ಟನಹಳ್ಳಿಯಲ್ಲಿ ಸಂಜೀವಿನಿ ಸಂಘ ಮಹಿಳೆಯರು ನಡೆಸುತ್ತಿರುವ ಬಟ್ಟೆ ಅಂಗಡಿ ಹಾಗೂ ಗ್ರಾಮ ಪಂಚಾಯಿತಿಯ 15 ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾದ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.
ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಯೋಜನೆಯಡಿ ಬೆಳೆಸಿದ ದೇವನಹಳ್ಳಿಯ ಪ್ರಸಿದ್ಧ ಹಣ್ಣಾದ ಚಕ್ಕೊತ ಹಣ್ಣಿನ ಗಿಡಗಳನ್ನು ಪರಿಶೀಲಿಸಿ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾದ ಮನೆಯನ್ನು ವೀಕ್ಷಿಸಿದರು. ಬೆಟ್ಟಕೋಟೆಯಲ್ಲಿ ರೇಷ್ಮೆ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಹಿಪ್ಪುನೇರಳೆ ಹೊಸನಾಟಿ, ನರ್ಸರಿ, ಹಿಪ್ಪುನೇರಳೆ ಮರ ಪದ್ಧತಿಯನ್ನು ಪರಿಶೀಲಿಸಿ, ರೇಷ್ಮೆಗೂಡಿನಿಂದ ತಯಾರಿಸಲಾದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…