ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ಕರೋನಾ ನಂತರ ಶೇಕಡಾ ಮೂವತ್ತರಷ್ಟು ಜನತೆ ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯರು ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್‌.ಚಂದ್ರಶೇಖರ್ ತಿಳಿಸಿದರು.

ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸುರಾನಾ ಕಾಲೇಜು ಇವರ ಸಹಬಾಗಿತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ. ಯುವಕರು ಸಾಕಷ್ಟು ಮಂದಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಹೊರ ಬರಲು ಯೋಗ, ಧ್ಯಾನ ಉತ್ತಮ ವ್ಯಾಯಾಮ, ಒಳ್ಳೆಯ ಚಿಂತನೆಗಳನ್ನು ಮಾಡಬೇಕು ಎಂದರು.

ಅತಿಯಾದ ಆಸೆ ಚಿಂತೆಯೂ ಸಹ ಮಾನವನ ಆಕಾಂಕ್ಷೆಗಳಲಿಂದಲೂ ಕೂಡ ಮಾನಸಿಕ ಖಿನ್ನತೆಗಳಿಗೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಈ ಗ್ರಾಮೀಣ ಪ್ರದೇಶದಲ್ಲಿ ನವೋದಯ ಚಾರಿಟೇಬಲ್ ಅಧ್ಯಕ್ಷರಾದ ಚೇತನ್ ಮತ್ತು ಅವರ ತಂಡ ಗ್ರಾಮೀಣ ಆರೋಗ್ಯ ಅಧ್ಯಯನ ಕೇಂದ್ರವನ್ನು ತೆರೆದಿರುವುದು ಬಹಳ ಸಂತೋಷದ ವಿಷಯ ಎಂದರು.

ಈ ಕಾರ್ಯಕ್ರಮದಲ್ಲಿ ಸುರಾನ ಕಾಲೇಜು ಮುಖ್ಯಸ್ಥರಾದ ಡಾ. ಸುದರ್ಶನ್ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಪರಮೇಶ್ವರ, ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಪೂರ್ಣಿಮಾ.ಗ್ರಾಮ ಪಂಚಾಯಿತಿ ಸದಸ್ಯರಾದ ಶ್ವೇತ ಮುನಿಶಾಮಿಗೌಡ,
ಅರಣ್ಯ ಇಲಾಖೆ ಉಪ ವಲಯ ಅರಣ್ಯಧಿಕಾರಿಗಳಾದ ಚಂದ್ರಶೇಖರ್ ಎಂಪಿಸಿಎಸ್ ಅಧ್ಯಕ್ಷರಾದ ಚೊಕ್ಕರೆಡ್ಡಿ ನವೋದಯ ಚಾರಿಟೇಬಲ್ ಟ್ರಸ್ಟ್ ತಂಡದ ಲೋಹಿತ್ .ವೈ.ಟಿ. ಕಾರ್ತಿಕ್ ಗೌಡ, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸುರನಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

5 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

6 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

11 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

12 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

16 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

17 hours ago