ದೊಡ್ಡಬಳ್ಳಾಪುರ: ಕರೋನಾ ನಂತರ ಶೇಕಡಾ ಮೂವತ್ತರಷ್ಟು ಜನತೆ ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯರು ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್.ಚಂದ್ರಶೇಖರ್ ತಿಳಿಸಿದರು.
ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸುರಾನಾ ಕಾಲೇಜು ಇವರ ಸಹಬಾಗಿತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ. ಯುವಕರು ಸಾಕಷ್ಟು ಮಂದಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಹೊರ ಬರಲು ಯೋಗ, ಧ್ಯಾನ ಉತ್ತಮ ವ್ಯಾಯಾಮ, ಒಳ್ಳೆಯ ಚಿಂತನೆಗಳನ್ನು ಮಾಡಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಸುರಾನ ಕಾಲೇಜು ಮುಖ್ಯಸ್ಥರಾದ ಡಾ. ಸುದರ್ಶನ್ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಪರಮೇಶ್ವರ, ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಪೂರ್ಣಿಮಾ.ಗ್ರಾಮ ಪಂಚಾಯಿತಿ ಸದಸ್ಯರಾದ ಶ್ವೇತ ಮುನಿಶಾಮಿಗೌಡ,
ಅರಣ್ಯ ಇಲಾಖೆ ಉಪ ವಲಯ ಅರಣ್ಯಧಿಕಾರಿಗಳಾದ ಚಂದ್ರಶೇಖರ್ ಎಂಪಿಸಿಎಸ್ ಅಧ್ಯಕ್ಷರಾದ ಚೊಕ್ಕರೆಡ್ಡಿ ನವೋದಯ ಚಾರಿಟೇಬಲ್ ಟ್ರಸ್ಟ್ ತಂಡದ ಲೋಹಿತ್ .ವೈ.ಟಿ. ಕಾರ್ತಿಕ್ ಗೌಡ, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸುರನಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…