ದೊಡ್ಡಬಳ್ಳಾಪುರ: ಕರೋನಾ ನಂತರ ಶೇಕಡಾ ಮೂವತ್ತರಷ್ಟು ಜನತೆ ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯರು ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್.ಚಂದ್ರಶೇಖರ್ ತಿಳಿಸಿದರು.
ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸುರಾನಾ ಕಾಲೇಜು ಇವರ ಸಹಬಾಗಿತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ. ಯುವಕರು ಸಾಕಷ್ಟು ಮಂದಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಹೊರ ಬರಲು ಯೋಗ, ಧ್ಯಾನ ಉತ್ತಮ ವ್ಯಾಯಾಮ, ಒಳ್ಳೆಯ ಚಿಂತನೆಗಳನ್ನು ಮಾಡಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಸುರಾನ ಕಾಲೇಜು ಮುಖ್ಯಸ್ಥರಾದ ಡಾ. ಸುದರ್ಶನ್ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಪರಮೇಶ್ವರ, ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಪೂರ್ಣಿಮಾ.ಗ್ರಾಮ ಪಂಚಾಯಿತಿ ಸದಸ್ಯರಾದ ಶ್ವೇತ ಮುನಿಶಾಮಿಗೌಡ,
ಅರಣ್ಯ ಇಲಾಖೆ ಉಪ ವಲಯ ಅರಣ್ಯಧಿಕಾರಿಗಳಾದ ಚಂದ್ರಶೇಖರ್ ಎಂಪಿಸಿಎಸ್ ಅಧ್ಯಕ್ಷರಾದ ಚೊಕ್ಕರೆಡ್ಡಿ ನವೋದಯ ಚಾರಿಟೇಬಲ್ ಟ್ರಸ್ಟ್ ತಂಡದ ಲೋಹಿತ್ .ವೈ.ಟಿ. ಕಾರ್ತಿಕ್ ಗೌಡ, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸುರನಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…