ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ಕರೋನಾ ನಂತರ ಶೇಕಡಾ ಮೂವತ್ತರಷ್ಟು ಜನತೆ ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯರು ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್‌.ಚಂದ್ರಶೇಖರ್ ತಿಳಿಸಿದರು.

ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸುರಾನಾ ಕಾಲೇಜು ಇವರ ಸಹಬಾಗಿತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ. ಯುವಕರು ಸಾಕಷ್ಟು ಮಂದಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಹೊರ ಬರಲು ಯೋಗ, ಧ್ಯಾನ ಉತ್ತಮ ವ್ಯಾಯಾಮ, ಒಳ್ಳೆಯ ಚಿಂತನೆಗಳನ್ನು ಮಾಡಬೇಕು ಎಂದರು.

ಅತಿಯಾದ ಆಸೆ ಚಿಂತೆಯೂ ಸಹ ಮಾನವನ ಆಕಾಂಕ್ಷೆಗಳಲಿಂದಲೂ ಕೂಡ ಮಾನಸಿಕ ಖಿನ್ನತೆಗಳಿಗೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಈ ಗ್ರಾಮೀಣ ಪ್ರದೇಶದಲ್ಲಿ ನವೋದಯ ಚಾರಿಟೇಬಲ್ ಅಧ್ಯಕ್ಷರಾದ ಚೇತನ್ ಮತ್ತು ಅವರ ತಂಡ ಗ್ರಾಮೀಣ ಆರೋಗ್ಯ ಅಧ್ಯಯನ ಕೇಂದ್ರವನ್ನು ತೆರೆದಿರುವುದು ಬಹಳ ಸಂತೋಷದ ವಿಷಯ ಎಂದರು.

ಈ ಕಾರ್ಯಕ್ರಮದಲ್ಲಿ ಸುರಾನ ಕಾಲೇಜು ಮುಖ್ಯಸ್ಥರಾದ ಡಾ. ಸುದರ್ಶನ್ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಪರಮೇಶ್ವರ, ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಪೂರ್ಣಿಮಾ.ಗ್ರಾಮ ಪಂಚಾಯಿತಿ ಸದಸ್ಯರಾದ ಶ್ವೇತ ಮುನಿಶಾಮಿಗೌಡ,
ಅರಣ್ಯ ಇಲಾಖೆ ಉಪ ವಲಯ ಅರಣ್ಯಧಿಕಾರಿಗಳಾದ ಚಂದ್ರಶೇಖರ್ ಎಂಪಿಸಿಎಸ್ ಅಧ್ಯಕ್ಷರಾದ ಚೊಕ್ಕರೆಡ್ಡಿ ನವೋದಯ ಚಾರಿಟೇಬಲ್ ಟ್ರಸ್ಟ್ ತಂಡದ ಲೋಹಿತ್ .ವೈ.ಟಿ. ಕಾರ್ತಿಕ್ ಗೌಡ, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸುರನಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

4 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

17 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

19 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

19 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

19 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

24 hours ago