ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ  ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2023 ರ ಡಿಸೆಂಬರ್ 26 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮಪಂಚಾಯಿತಿ, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಷರತ್ತು

1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)

2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುರ್ತ್ತೀರಾದವರನ್ನು ಪರಿಗಣಿಸಲಾಗುವುದು.

3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು

4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,

5) ಸದರಿ ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.

 6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.

7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ಏಕಲಚೇತನರಾಗಿರಬಾರದು

8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.

9).ಮಾಹೆಯಾನ ಗೌರವಧನ ರೂ.9,000/- ನೀಡಲಾಗುವುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago