ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ  ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2023 ರ ಡಿಸೆಂಬರ್ 26 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮಪಂಚಾಯಿತಿ, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿಗಳಿಗೆ ನೇಮಕಾತಿ ಮಾಡಲಾಗುತ್ತದೆ.

ಷರತ್ತು

1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)

2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುರ್ತ್ತೀರಾದವರನ್ನು ಪರಿಗಣಿಸಲಾಗುವುದು.

3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು

4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,

5) ಸದರಿ ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.

 6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.

7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ಏಕಲಚೇತನರಾಗಿರಬಾರದು

8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.

9).ಮಾಹೆಯಾನ ಗೌರವಧನ ರೂ.9,000/- ನೀಡಲಾಗುವುದು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

6 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

17 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

18 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago