ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2024 ರ ಫೆಬ್ರವರಿ 29 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ನೆಲಮಂಗಲ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹುದ್ದೆ-01, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿ, ಸೋಲದೇವನಹಳ್ಳಿ ಗ್ರಾಮ ಪಂಚಾಯತಿಗೆ ತಲಾ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತದೆ.

ಷರತ್ತುಗಳು

1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)
2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು
ಪರಿಗಣಿಸಲಾಗುವುದು.
3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು
4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,
5) ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.
6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.
7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ವಿಕಲಚೇತನರಾಗಿರಬಾರದು.
8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.
9) ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಾಹೆಯಾನ ಗೌರವಧನ ರೂ.15,000/- ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ರೂ.9000/-ಗೌರವಧನ ನೀಡಲಾಗುವುದು. ಇಲಾಖೆಯಿಂದ ಕಾಲಕಾಲಕ್ಕೆ ವಿಧಿಸುವ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

18 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

23 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago