ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು 2024 ರ ಫೆಬ್ರವರಿ 29 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ನೆಲಮಂಗಲ ತಾಲ್ಲೂಕು ಪಂಚಾಯಿತಿಗೆ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹುದ್ದೆ-01, ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ಗ್ರಾಮಪಂಚಾಯಿತಿ, ಸೋಲದೇವನಹಳ್ಳಿ ಗ್ರಾಮ ಪಂಚಾಯತಿಗೆ ತಲಾ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಮಾಡಲಾಗುತ್ತದೆ.

ಷರತ್ತುಗಳು

1) ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು. (ಯು.ಡಿ.ಐ.ಡಿ. ಲಗತ್ತಿಸಬೇಕು.)
2) ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀಣ೯ರದವರಿಗೆ ಆದ್ಯತೆ. ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು
ಪರಿಗಣಿಸಲಾಗುವುದು.
3) 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು
4) ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ಅಂಗವಿಕಲರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,
5) ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ – ಬಿಡುಗಡೆ ಮಾಡಬಹುದಾಗಿದೆ.
6) ಗೌರವಧನ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ.
7, ಸಮರ್ಥ ವಿಕಲಚೇತನರಾಗಿರಬೇಕು ತೀರ್ವತರ ವಿಕಲಚೇತನರಾಗಿರಬಾರದು.
8) ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು.
9) ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಮಾಹೆಯಾನ ಗೌರವಧನ ರೂ.15,000/- ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ರೂ.9000/-ಗೌರವಧನ ನೀಡಲಾಗುವುದು. ಇಲಾಖೆಯಿಂದ ಕಾಲಕಾಲಕ್ಕೆ ವಿಧಿಸುವ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

4 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

9 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

10 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

12 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

15 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago